7:57 AM Thursday6 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

Udupi | ರಾಷ್ಟ್ರೀಯ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌: ಉಡುಪಿಯ ಮಾನ್ಸಿಗೆ ಕಂಚು; ಸಚಿವೆ ಹೆಬ್ಬಾಳ್ಕರ್ ಶ್ಲಾಘನೆ

13/08/2025, 19:10

ಉಡುಪಿ(reporterkarnataka.com): ಉತ್ತರ ಪ್ರದೇಶದ ಗ್ರೇಟರ್‌ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಉಡುಪಿ ಜಿಲ್ಲೆಯ ಮಾನ್ಸಿ ಜೆ ಸುವರ್ಣ ಅವರು ಕಂಚಿನ ಪದಕ ಗೆದ್ದಿದ್ದು, ಅವರ ಸಾಧನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘಿಸಿದ್ದಾರೆ.


ಮೀನುಗಾರಿಕೆಯಲ್ಲಿ ತೊಡಗಿರುವ ಮಲ್ಪೆಯ ಮಾಲತಿ ಹಾಗೂ ಜಗದೀಶ್ ಸುವರ್ಣ ದಂಪತಿ ಪುತ್ರಿ ಮಾನ್ಸಿ ಗೆದ್ದಿರುವ ಕಂಚಿನ ಪದಕ ರಾಜ್ಯದ ಇತರ ಬಾಕ್ಸರ್‌ಗಳಿಗೆ ಸ್ಫೂರ್ತಿಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಬಾಕ್ಸಿಂಗ್‌ ಕ್ರೀಡೆ ವಿರಳ. ಈ ಕ್ರೀಡೆ ಮತ್ತಷ್ಟು ಬೆಳೆಯಲಿ. ಕರಾವಳಿಯ ಮಕ್ಕಳು ಬಾಕ್ಸಿಂಗ್‌ನಲ್ಲಿ ಮಿಂಚಲಿ ಎಂದು ಸಚಿವರು ಹಾರೈಸಿದ್ದಾರೆ.
ಮಾನ್ಸಿ ಸುವರ್ಣ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಹೆಚ್ಚು ಪದಕಗಳನ್ನು ಜಯಿಸಲಿ, ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತರಲಿ. ಆಕೆಯ‌ ಸಾಧನೆಗೆ ನಮ್ಮ ಸರ್ಕಾರ ಸದಾ ಬೆನ್ನೆಲುಬು ಆಗಿ ನಿಲ್ಲಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು