7:43 PM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಕನ್ನಡ ಜಾನಪದ ಪರಿಷತ್ ಕಾಸರಗೋಡು ಘಟಕ ಅಧ್ಯಕ್ಷರಾಗಿ ಡಾ. ವಾಮನ್ ರಾವ್ ಬೇಕಲ್ ನೇಮಕ

13/08/2025, 22:17

ಕಾಸರಗೋಡು(reporterlarnataka.com): ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಸ್ಥಾಪಕ ಸಂಚಾಲಕರಾಗಿರುವ ಡಾ. ವಾಮನ್ ರಾವ್ ಬೇಕಲರನ್ನು ಕನ್ನಡ ಜಾನಪದ ಪರಿಷತ್ತು ಬೆಂಗಳೂರಿನ ಸ್ಥಾಪಕ ಅಧ್ಯಕ್ಷರಾಗಿರುವ ಡಾ. ಎಸ್ ಬಾಲಾಜಿ ಇವರು ಕೇರಳ ರಾಜ್ಯ ಕಾಸರಗೋಡು ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ನೀಡಿದ್ದಾರೆ.
ಕಾಸರಗೋಡು ಜಿಲ್ಲೆಯ ಜಾನಪದ ವಿದ್ವಾಂಸರು, ಕಲಾವಿದರು, ಜಾನಪದ ಕಲಾ ಕಾಯಕ ಯೋಗಿಗಳು, ತಂಡಗಳು, ಆಸಕ್ತ ಜಾನಪದ ವ್ಯಕ್ತಿಗಳು ಡಾ. ವಾಮನ್ ರಾವ್ ಬೇಕಲ್, ಅಧ್ಯಕ್ಷರು, ಕನ್ನಡ ಜಾನಪದ ಪರಿಷತ್ತು, ಕನ್ನಡ ಭವನ ಸಂಕೀರ್ಣ, ನುಳ್ಳಿಪ್ಪಾಡಿ, ಕಾಸರಗೋಡು 671121.ಮೊ. 9633073400,ಈ ವಿಳಾಸದಲ್ಲಿ ಸಂಪರ್ಕಿಸಬೇಕಾಗಿ ವಿನಂತಿ.
ಸದ್ಯದಲ್ಲಿಯೇ ಉದ್ಘಾಟನೆ ಗೊಳ್ಳಲಿರುವ ಕನ್ನಡ ಜಾನಪದ ಪರಿಷತ್ತು ಕಾಸರಗೋಡು ಘಟಕದ ಆಯ್ದ ಆಸಕ್ತರ ಸಮಿತಿಯಲ್ಲಿ ಸೇರ್ಪಡೆಗೊಳ್ಳಲು ಇಚ್ಚಿಸುವ ಜಾನಪದ ಕಾಯಕ ಯೋಗಿಗಳು 9633073400ಈ ಸಂಖ್ಯೆಯಲ್ಲಿ ಸಂಪರ್ಕಿಸಬೇಕು.
ಉದ್ಘಾಟನಾ ಸಮಾರಂಭದಲ್ಲಿ 10 ಮಂದಿ ಜಾನಪದ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ ಮೇರು ವ್ಯಕ್ತಿತ್ವಗಳನ್ನು “ಜಾನಪದ ಕುಲ ಪುರಸ್ಕಾರ “ಪ್ರಶಸ್ತಿ ಹಾಗೂ 5 ತಂಡಗಳಿಗೆ “ಜಾನಪದ ಕುಲ ಸಾಧಕ ಪ್ರಶಸ್ತಿ “ನೀಡಿ ಗೌರವಿಸಲಿದೆ. ಇದಕ್ಕೆ ಸಂಬಂಧ ಪಟ್ಟ ದಾಖಲೆಯೊಂದಿಗೆ ಡಾ. ವಾಮನ್ ರಾವ್ ಬೇಕಲ್ ಅವರನ್ನು ವಾಟ್ಸಪ್ ಮೂಲಕ ಸಂಪರ್ಕಿಸಬೇಕೆಂದು ಕನ್ನಡ ಜಾನಪದ ಪರಿಷತ್ತು ಹಾಗೂ ಕನ್ನಡ ಭವನ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು