12:47 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಆಧುನಿಕ ಜಗತ್ತಿನಲ್ಲೂ ಗ್ರಂಥಾಲಯ ಮಹತ್ವ ಕಳೆದುಕೊಂಡಿಲ್ಲ; ಗ್ರಂಥಾಲಯ ನಮ್ಮ ಸಂಪತ್ತು: ವಾಮನ್ ಕುದ್ರೋಳಿ

14/08/2025, 10:05

ಮಂಗಳೂರು(reporterkarnataka.com): ಆಧುನಿಕ ಜಗತ್ತಿನ ಈ ಡಿಜಿಟಲ್ ಯುಗದಲ್ಲೂ, ಗ್ರಂಥಾಲಯ ತನ್ನ ಮಹತ್ವವನ್ನು ಎಲ್ಲೂ ಕಳೆದುಕೊಳ್ಳದೆ ಕಾಲಕ್ಕೆ ತಕ್ಕಂತೆ ಹೊಸತನವನ್ನು ಮೈಗೂಡಿಸಿಕೊಂಡು ತನ್ನ ಅನಿವಾರ್ಯತೆಯನ್ನು ಸದಾ ಜಾರಿಯಲ್ಲಿರಿಸಿಕೊಂಡುದನ್ನು ನಾವು ಇವತ್ತಿಗೂ ಕಾಣುತಿದ್ದೇವೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಸಹಾಯಕ ಗ್ರಂಥಪಾಲಕ ವಾಮನ್ ಕುದ್ರೋಳಿ ಹೇಳಿದರು.
ಅವರು ಇತ್ತೀಚಿಗೆ ಮಂಗಳೂರು ವಿವಿ ಕಾಲೇಜಿನಲ್ಲಿ ಕಾಲೇಜು ಗ್ರಂಥಾಲಯ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಯೋಗದೊಂದಿಗೆ ಆಯೋಜಿಸಿದ್ದ ಗ್ರಂಥಾಲಯ ಪಿತಾಮಹ ಡಾ. ಎಸ್. ಆರ್. ರಂಗನಾಥ್ ಅವರ 133ನೇ ಸಂಸ್ಮರಣಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಜ್ಞಾನದಾಹಿಗಳಿಗೆ, ಜಿಜ್ಞಾಸುಗಳಿಗೆ ಗ್ರಂಥಾಲಯ ಒಂದು ವರವಾಗಿದೆ. ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥ್ ಅವರು ಗ್ರಂಥಾಲಯದ ಮೇಲ್ಮೆಗೆ ‘ ಕೋಲೋನ್ ಕ್ಲಾಸಿಫಿಕೇಷನ್ ‘ ಮೂಲಕ ಆವಿಷ್ಕಾರ ಭಾಷ್ಯಾಸೂತ್ರವನ್ನು ಸಿದ್ದಪಡಿಸಿ ಜಗತ್ತಿಗೆ ನೀಡಿದ ಕಾರಣವಾಗಿ ಓದುಗರು ಗ್ರಂಥಾಲಯಕ್ಕೆ ತುಂಬಾ ಹತ್ತಿರವಾಗುವಂತಾಯಿತು ಮತ್ತು ತನ್ನ ಅಸ್ತಿತ್ವವನ್ನು ಮತ್ತಷ್ಟು ವೃದ್ಧಿಸಿಕೊಳ್ಳಲು ಕಾರಣವಾಯಿತು. ಹಾಗೆ, ವಿದ್ಯಾರ್ಥಿಗಳು ಹೆಚ್ಚು ಹೆಚ್ಚಾಗಿ ಗ್ರಂಥಾಲಯವನ್ನು ಬಳಸಿಕೊಳ್ಳಬೇಕು ಎಂದು ಅವರು ನುಡಿದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಗಣಪತಿ ಗೌಡ ಎಸ್. ಅವರು ವಹಿಸಿ, ಗ್ರಂಥಾಲಯ ಸಂಸ್ಥೆಯೊಂದಕ್ಕೆ ಮೆದುಳು ಇದ್ದಂತೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಗ್ರಂಥಾಲಯದ ಪಾತ್ರ ಪ್ರಮುಖವಾಗಿದೆಯೆಂದರು.
ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಡಾ. ಸಿದ್ದರಾಜು ಉಪಸ್ಥಿತರಿದ್ದರು.
ಗ್ರಂಥಪಾಲಕಿ. ಡಾ. ವನಜಾ ಸ್ವಾಗತಿಸಿದರು. ವಿದ್ಯಾರ್ಥಿ ಸಂದೀಪ್ ಸಮಯಿ ಕಾರ್ಯಕ್ರಮ ನಿರೂಪಿಸಿದರು. ಡಾ. ಸಿದ್ದರಾಜು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು