2:36 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Chikkamagaluru | ಬಣಕಲ್: ಯುವಕನ ಜತೆ 22ರ ಹರೆಯದ ಗೃಹಿಣಿ ಪರಾರಿ: ಹೆದ್ದಾರಿ ತಡೆದು ಪ್ರತಿಭಟನೆ

14/08/2025, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

ವಿವಾಹಿತ ಮಹಿಳೆಯೊಬ್ಬರು ಮುಸ್ಲಿಂ ಯುವಕನ ಜೊತೆ ಪರಾರಿ ಆರೋಪ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆ ಎದುರು ಜಮಾಯಿಸಿ, ರಸ್ತೆ ತಡೆ ನಡೆಸಿದರು.


2 ವರ್ಷದಿಂದ ಮದುವೆಯಾಗಿದ್ದ 22 ವರ್ಷದ ಪೂಜಾ ಎಂಬ ಗೃಹಿಣಿ ಮುಸ್ಲಿಂ ಯುವಕ ಆಶಿಕ್ ಎಂಬಾತನ ಜತೆ ಪರಾರಿಯಾದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದೆ.
ನಾಪತ್ತೆಯಾದ ಮಹಿಳೆಯ ಪತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ದೂರಿನನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು ಮಹಿಳೆಯನ್ನ ಪತ್ತೆ ಮಾಡಿದ್ದಾರೆ.

ಹಿಂದೂ ಸಂಘಟನೆ ಮುಖಂಡರು ಹಾಗೂ ಗ್ರಾಮಸ್ಥರು
ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದರು. ಪೊಲೀಸ್ ಠಾಣೆಯ ಗೇಟ್ ಹಾಕಿದ್ದಕ್ಕೆ ಹಿಂದೂ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿದವು.
ಏಕಾಏಕಿ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆ ನಡೆಸಿದ ಹಿಂದೂ ಮುಖಂಡರು ಪ್ರತಿಭಟನೆ ನಡೆಸಿದರು. ರಸ್ತೆ ತಡೆ ನಡೆಸಿದ ಸಂಘಟಕರು- ಗ್ರಾಮಸ್ಥರ ಮನವೋಲಿಸಲು ಪೊಲೀಸರ ಹರಸಾಹಸ ನಡೆಸಬೇಕಾಯಿತು. ನಂತರ ಠಾಣೆ ಮುಂಭಾಗಕ್ಕೆ ಬಿಡುವ ಭರವಸೆ ನೀಡಿದ್ದರಿಂದ ಪ್ರತಿಭಟನೆ ವಾಪಸ್ ಪಡೆಯಲಾಯಿತುಮ
ಮುಸ್ಲಿಂ ಯುವಕನ ವಿರುದ್ಧ ಕುಟುಂಬಸ್ಥರು ಹಾಗೂ ಹಿಂದೂ ಸಂಘಟಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಣಕಲ್ ಪೊಲೀಸ್ ಠಾಣೆಯ ಮುಂದೆ ಭಾರಿ ಪ್ರತಿಭಟನೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು