2:23 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಟಿ

15/08/2025, 21:09

ನವದೆಹಲಿ(reporterkarnataka.com): ಡಿಸಿಎಂ ಡಿ.ಕೆ. ಶಿವಕುಮಾರ್‌ ʼಧರ್ಮಸ್ಥಳದ ವಿರುದ್ಧ ಷಡ್ಯಂತರ ನಡೆದಿದೆʼ ಎಂದಿದ್ದಾರೆ. ಆತುರದಲ್ಲಿ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರದ್ದೇ ಷಡ್ಯಂತರವಿದೆಯೇ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಚಾಟಿ ಬೀಸಿದ್ದಾರೆ.
ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವರು, ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತರ ಇರುವುದು ಡಿಸಿಎಂಗೆ ಗೊತ್ತಿದೆ ಅಂದಮೇಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಗೊತ್ತಾಗದೇ ಹೋಯಿತೇ? ಎಂದು ಪ್ರಶ್ನಿಸಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಅನಾಮಿಕ ಶವಗಳನ್ನು ಹೂತು ಹಾಕಿದೆ ಎಂಬ ಅನಾಮಿಕನ ಆರೋಪ ಕುರಿತಂತೆ ಪ್ರಕರಣ ಕೈಗೆತ್ತಿಕೊಂಡ ರಾಜ್ಯ ಸರ್ಕಾರ, ಆತುರದಲ್ಲಿ SIT ರಚಿಸುವ ಅವಶ್ಯಕತೆ ಏನಿತ್ತು? ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

*ಧರ್ಮಸ್ಥಳಕ್ಕೆ ಕಪ್ಪು ಮಸಿ-ಸರ್ಕಾರದ್ದೂ ಸಾಥ್‌ ಇದೆಯೇ?:* ತನಿಖೆಗೆ ಒತ್ತಡ, ಒತ್ತಾಯ ಹೆಚ್ಚಿದ್ದರಿಂದ ರಾಜ್ಯ ಸರ್ಕಾರ SIT ತನಿಖೆಗೆ ಆದೇಶಿಸಿತ್ತು. ಆದರೆ‌, ಆತುರದಲ್ಲಿ ಇಂಥ ನಿರ್ಧಾರ ತೆಗೆದುಕೊಂಡು ಧರ್ಮಸ್ಥಳಕ್ಕೆ ಕಪ್ಪು ‌ಮಸಿ ಬಳಿಯುವ ಯತ್ನಕ್ಕೆ ಸರ್ಕಾರವೂ ಸಾಥ್ ನೀಡಿದೆಯೇ? ಇದರಲ್ಲಿ ಸರ್ಕಾರದ್ದೇ ಷಡ್ಯಂತರ ಏನಾದರೂ ಇದೆಯೇ? ಎಂದು ಸಚಿವ ಜೋಶಿ ಮಾರ್ಮಿಕವಾಗಿ ಹೇಳಿದ್ದಾರೆ.

*ಡಿಸಿಎಂಗೆ ಗೊತ್ತಾದ ವಿಚಾರ ಸಿಎಂಗೆ ಗೊತ್ತಾಗಲಿಲ್ಲವೇ?:* ಡಿಸಿಎಂ ಡಿಕೆ ಶಿವಕುಮಾರ್, ʼಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ. ಯಾರದ್ದೆಂದು ಹೇಳಲ್ಲ. ಒಳ್ಳೇ ಯೋಜನೆ, ತಂತ್ರಗಾರಿಕೆ ಹೆಣೆದು ಕಪ್ಪು ಚುಕ್ಕೆ ತರಲು ನೋಡುತ್ತಿದ್ದಾರೆ. ಆದರೆ, ಯಾರು? ಏನು? ಅಂತ ಮಾತನಾಡಲು ನಾನು ಹೋಗುವುದಿಲ್ಲ. ತೇಜೋವಧೆ ಮೂಲಕ ನೂರಾರು ವರ್ಷಗಳ ಪರಂಪರೆ ಹಾಳು ಮಾಡಲು ಹೊರಟಿದ್ದಾರೆʼ ಎಂದಿದ್ದಾರೆ. ಡಿಸಿಎಂಗೆ ಗೊತ್ತಿರುವ ಈ ವಿಚಾರ ಸಿಎಂಗೆ ಗೊತ್ತಾಗಿರಲಿಲ್ಲವೇ? ಎಂದು ಜೋಶಿ ಪ್ರಶ್ನಿಸಿದ್ದಾರೆ.
ಡಿಕೆ ಶಿವಕುಮಾರ್​ ಹೇಳುವಂತೆ ಷಡ್ಯಂತರ ನಡೆಯುತ್ತಿದೆ ಎಂಬ ವಿಚಾರ ಗೊತ್ತಾದ ಮೇಲೂ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ SIT ರಚಿಸಿದ್ದೇಕೆ? ಇಷ್ಟೆಲ್ಲಾ ಹೈಡ್ರಾಮಾ ಮಾಡುವ ಪ್ರಸಂಗವಾದರೂ ಏನಿತ್ತು? ಎಂದು ಸಚಿವರು ವಾಗ್ದಾಳಿ ನಡೆಸಿದ್ದಾರೆ.

*ಗುಡ್ಡ ಅಗೆದರೂ ಇಲಿ ಹಿಡಿಯದಂತಾದ ಸರ್ಕಾರ:* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸತ್ಯ ತಿಳಿದಿದ್ದರೂ SIT ತನಿಖೆ, ಶೋಧ ಕಾರ್ಯ, ಅಗೆತ ಕಾರ್ಯಾಚರಣೆಗೆ ಆದೇಶ ನೀಡಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಪೊಲೀಸ್‌ ತನಿಖೆ ಬಳಿಕ ಕುರುಹುಗಳೇನಾದರೂ ಸಿಕ್ಕಿದ್ದೇ ಆಗಿದ್ದಲ್ಲಿ SIT ರಚಿಸಿ ಹೆಚ್ಚಿನ ತನಿಖೆ ಮುಂದುವರಿಸಬಹುದಿತ್ತು. ಆದರೆ, ʼಸರ್ಕಾರ ಗುಡ್ಡ ಅಗೆದು ಇಲಿ ಹಿಡಿಯದಂತೆʼಯೂ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು