7:04 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Shivamogga | ತೀರ್ಥಹಳ್ಳಿ: ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇಗುಲದಿಂದ 1 ಲಕ್ಷಕ್ಕೂ ಅಧಿಕ ಹಣ ಕದ್ದ ಖತರ್ನಾಕ್ ಕಳ್ಳನ ಬಂಧನ

15/08/2025, 22:15

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಿಂದ ಒಂದು ಲಕ್ಷಕ್ಕೂ ಅಧಿಕ ಹಣ ಕಳ್ಳತನ ಮಾಡಿದ್ದ ಖತರ್ನಾಕ್ ಕಳ್ಳನ ಬಂಧನವಾಗಿದೆ.
ಸಿಸಿ ಕ್ಯಾಮರಾ ಕಣ್ಣು ತಪ್ಪಿಸಿದ್ದ ಖತರ್ನಾಕ್ ಕಳ್ಳ ರಾಮೇಶ್ವರನ ಮೂರನೇ ಕಣ್ಣಿನಲ್ಲಿ ಸಿಕ್ಕಿಬಿದ್ದಂತೆ ಆಗಿದೆ ಎಂದು ಭಕ್ತರು ಮಾತನಾಡಿಕೊಳ್ಳುತ್ತಿದ್ದಾರೆ.
ಮೊದಲಿಗೆ ರಾಮೇಶ್ವರ ದೇವಸ್ಥಾನದ ಪಕ್ಕದಲ್ಲಿ ಇದ್ದಂತಹ ಮಾಧವ ದೇವಸ್ಥಾನದಲ್ಲಿ ಕಳ್ಳತನ ಮಾಡಲು ಯತ್ನಿಸಿ ಪಕ್ಕದ ವೆಂಕಟರಮಣ ದೇವಸ್ಥಾನದ ಸಿಸಿ ಕ್ಯಾಮರದಲ್ಲಿ ಸೇರಿಯಾಗಿತ್ತು. ನಂತರ ರಾಮೇಶ್ವರ ದೇವಸ್ಥಾನದ ಅನ್ನ ದಾಸೋಹ ಕೊಠಡಿಯಲ್ಲಿ ಇದ್ದ ಹಣವನ್ನು ಕಳ್ಳತನ ಮಾಡಿದ್ದ. ಅಷ್ಟೇ ಅಲ್ಲದೆ ಎರಡು ಮೊಬೈಲ್ ಕೂಡ ದೋಚಿದ್ದ. ಅನ್ನ ದಾಸೋಹ ಕೊಠಡಿಯ ಹಲವು ಬಾಗಿಲುಗಳನ್ನು ಮುರಿದು ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ಹಾಗೂ ಸಣ್ಣದೊಂದು ಕಾಣಿಕೆ ಹುಂಡಿ ಸಹ ತೆಗೆದು ಅದರಲ್ಲಿದ್ದ ಹಣ ದೋಚಿಕೊಂಡು ಪರಾರಿಯಾಗಿದ್ದ.

ಮಾಸ್ಕ್ ಧರಿಸಿ ಕಳ್ಳತನ ಮಾಡಿದ್ದ ಆ ಮಾಸ್ಕ್ ಮ್ಯಾನ್ ಯಾರು? ಎಂಬುದು ಬಾರಿ ಸಂಚಲನ ಮೂಡಿಸಿದ್ದ. ತೀರ್ಥಹಳ್ಳಿ ಪೊಲೀಸರ ಚಾಣಕ್ಷತನದಿಂದ ಮೂರು ದಿನದೊಳಗೆ ಕಳ್ಳನನ್ನು ಬಂಧಿಸಲಾಗಿದೆ. ಡಿ ವೈ ಎಸ್ ಪಿ ಅರವಿಂದ್ ಕಲಗುಂಜಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಿಂದಾಗಿ ಖತರ್ನಾಕ್ ಕಳ್ಳನ ಬಂಧನವಾಗಿದೆ.
ಬಂಧನವಾದ ಖತರ್ನಾಕ್ ಕಳ್ಳನಿಂದ ಎರಡು ಮೊಬೈಲ್ ಹಾಗೂ 20 ಸಾವಿರ ಹಣ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು