10:35 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

Mangaluru | ಕೆನರಾ ಬ್ಯಾಂಕಿನಿಂದ ಪ್ರತಿಭಾವಂತ ಎಸ್ ಸಿ/ ಎಸ್ ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣೆ

16/08/2025, 18:30

ಮಂಗಳೂರು(reporterkarnataka.com): ಕೆನರಾ ಬ್ಯಾಂಕ್ ಡಾ. ಅಂಬೇಡ್ಕರ್ ವಿದ್ಯಾ ಜ್ಯೋತಿ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಎಸ್ ಸಿ/ ಎಸ್ ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಮಂಗಳೂರಿನ ಕೇಂದ್ರ ವೃತ್ತ ಕಚೇರಿಯಲ್ಲಿ ನಡೆಯಿತು.
ಶಿಕ್ಷಣಕ್ಕಾಗಿ ಒಟ್ಟು 45,786 ವಿದ್ಯಾರ್ಥಿನಿಯರಿಗೆ ಮತ್ತು 2600 ಅಧಿಕ ಶಾಲೆಗಳಿಗೆ ಸುಮಾರು 1824.68 ಲಕ್ಷ ವಿದ್ಯಾರ್ಥಿ ವೇತನವನ್ನು ಭಾರತಾದ್ಯಂತ ನೀಡುವ ಮೂಲಕ ಬೆಂಬಲಿಸಲಾಯಿತು. ದೇಶದ ಯುವ ಮನಸುಗಳನ್ನು ಸಬಲೀಕರಣಗೊಳಿಸುವ ಮತ್ತು ಹಿಂದುಳಿದ ಪ್ರತಿಭಾವಂತ ಎಸ್ ಸಿ ಎಸ್ ಟಿ ಬಾಲಕಿಯರಿಗೆ ವಿದ್ಯಾರ್ಥಿವೇತನವನ್ನು ನೀಡುವುದರ ಮೂಲಕ ಶೈಕ್ಷಣಿಕ ಶ್ರೇಷ್ಠತೆಯನ್ನು ಸಾಧಿಸುವಲ್ಲಿ ಸಹಾಯ ಮಾಡುವ ಗುರಿಯನ್ನು ಕೆನರಾ ಬ್ಯಾಂಕ್, ಭಾರತಾದ್ಯಂತ 26 ವೃತ್ತ ಕಚೇರಿಗಳಲ್ಲಿ 177 ಪ್ರಾದೇಶಿಕ ಕಚೇರಿಗಳಲ್ಲಿ ಮತ್ತು 7660ಕ್ಕೂ ಹೆಚ್ಚು ಶಾಖೆಗಳಲ್ಲಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿ ವೇತನದ ಯೋಜನೆಯ ಹೊರತಾಗಿ ಕೆನರಾ ಬ್ಯಾಂಕ್ ಸಿ ಎಸ್ ಆರ್ ಕಾರ್ಯಕ್ರಮದಲ್ಲಿ ಗ್ರಾಮೀಣ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯ ನಿರ್ಮಾಣ, ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸಿದೆ ಎಂದು ಅಧ್ಯಕ್ಷತೆಯನ್ನು ವಹಿಸಿದ ಬ್ಯಾಂಕಿನ ಜನರಲ್ ಮ್ಯಾನೇಜರ್ ಮಂಜುನಾಥ್ ಬಿ. ಸಿಂಗೈ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ಬಿ.ಎಸ್. ಹೇಮಲತಾ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು ಎಜಿಎಂ ಸಂಜಯ್ ಕುಮಾರ್ ತ್ರಿವೇದಿ, ಡೆಪ್ಯುಟಿ ಜನರಲ್ ಮ್ಯಾನೇಜರ್ ಲತಾ ಕುರುಪ್ , ಮತ್ತು ಶೈಲೇಂದ್ರನಾಥ್ ಶೀತ್, ವ್ಯವಸ್ಥಾಪಕರಾದ ತುಶಾಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿರಿಯ ವ್ಯವಸ್ಥಾಪಕಿ ಸ್ವಾತಿ ಕೆ. ಸ್ವಾಗತಿಸಿದರು. ಸಂಜಯ್ ಕುಮಾರ್ ತ್ರಿವೇದಿ ಧನ್ಯವಾದ ಸಮರ್ಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು