4:06 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಅನಾಮಿಕ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿ: ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆಗೆ ಮಂಗಳೂರು ಧರ್ಮ ಪ್ರಾಂತ್ಯ ಆಕ್ಷೇಪ

16/08/2025, 20:10

ಮಂಗಳೂರು(reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ, ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮುಸುಕುಧಾರಿ ವ್ಯಕ್ತಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂಬುದಾಗಿ ಪ್ರತಿ ಪಕ್ಷ ನಾಯಕ ಆರ್. ಅಶೋಕ್ ಅವರು ಗಾಳಿ ಸುದ್ದಿಯನ್ನು ಆಧರಿಸಿ ನೀಡಿರುವ ಹೇಳಿಕೆಗೆ ಯಾವುದಾದರೂ ಪುರಾವೆ ಇದೆಯೇ? ಅವರ ಹೇಳಿಕೆಗೆ ಆಧಾರವಾದರೂ ಏನು ಎಂದುದನ್ನು ನಾವು ತಿಳಿಯ ಬಯಸುತ್ತೇವೆ ಎಂದು ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂದನೀಯ ಫಾ. ಜೆ.ಬಿ. ಸಲ್ದಾನ್ಹಾ ಮತ್ತು ರೋಯ್ ಕ್ಯಾಸ್ಟಲಿನೊ ಅವರು ಪ್ರಶ್ನಿಸಿದ್ದಾರೆ.
ಏಕೆಂದರೆ ಪ್ರತಿ
ಪಕ್ಷ ನಾಯಕರಂತಹ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಯಾವುದೇ ಪುರಾವೆಗಳಿಲ್ಲದೆ ಬಾಲಿಶವಾದ
ಹೇಳಿಕೆ ನೀಡ ಬಾರದು ಎಂದು ತಿಳಿಸಿದ್ದಾರೆ.
ಇನ್ನು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರು ಧರ್ಮಸ್ಥಳದ ಬೆಳವಣಿಗೆ ಕುರಿತು ಕ್ರೈಸ್ತರ ಸ್ಮಶಾನ ಭೂಮಿಯನ್ನು ಎಳೆದು ತಂದಿರುವುದು ಸರಿಯಾದ ಕ್ರಮವಲ್ಲ. ಕ್ರೈಸ್ತರ ದಫನ ಭೂಮಿಯಲ್ಲಿ ಅನಾಮಧೇಯ ಅಥವಾ ಅನಾಥ ಶವಗಳನ್ನು ಹೂಳುವುದಿಲ್ಲ. ಕ್ರೈಸ್ತರ ಸ್ಮಶಾನದಲ್ಲಿ ದಫನ ಮಾಡುವ ಪ್ರತಿಯೊಂದು ಮೃತದೇಹಕ್ಕೂ ಸರಿಯಾದ ದಾಖಲೆಗಳು ಇರುತ್ತವೆ. ಚರ್ಚ್ ಗಳ ಸ್ಮಶಾನದಲ್ಲಿ ಸಂಬಂಧಪಟ್ಟ ಚರ್ಚ್ ಗಳ ಸದಸ್ಯರ ಮೃತ ದೇಹಗಳನ್ನು ಮಾತ್ರ ಹೂಳಲಾಗುತ್ತಿದೆ. ಬೇರೊಂದು ಚರ್ಚಿನ ಸದಸ್ಯರ ಮೃತ ದೇಹವನ್ನು ಕೂಡಾ ದಫನ ಮಾಡುವುದಿಲ್ಲ. ಜನಾರ್ಧನ ಪೂಜಾರಿ ಅವರು ಕ್ರೈಸ್ತರ ದಫನ ಭೂಮಿಯ ಬಗ್ಗೆ ಯಾವುದೇ ತಿಳುವಳಿಕೆ ಇಲ್ಲದೆ ಹೇಳಿಕೆ ನೀಡಿರ ಬಹುದೆಂದು ನಮ್ಮ ಅನಿಸಿಕೆ. ಅಂತಹ ಹೇಳಿಕೆಯನ್ನು ಅವರು ನೀಡ ಬಾರದಿತ್ತು. ಧರ್ಮಸ್ಥಳ ಗ್ರಾಮದಲ್ಲಿ ನೆಲ ಅಗೆಯುವ ವಿಚಾರದ ಬಗ್ಗೆ ಹೇಳಿಕೆ ನೀಡುವ ಭರದಲ್ಲಿ ಕ್ರೈಸ್ತರ ದಫನ ಭೂಮಿಯನ್ನು ಎಳೆದು ತಂದಿರುವುದು ನಮಗೆ ಬೇಸರ ತಂದಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು