12:00 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

19/08/2025, 23:50

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnata@gnail.com

ಧರ್ಮಸ್ಥಳ ಎಂದರೆ ಕೊಲೆಗಡಕರ ಹಾಗೂ ಅತ್ಯಾಚಾರಿಗಳು ಎಂದು ಬಿಂಬಿಸುವ ಕೆಲಸ ಆಗುತ್ತಿತ್ತು.
ಆ ಕುತಂತ್ರಿಗಳ ಕುತಂತ್ರವನ್ನು ಬಯಲು ಮಾಡುವುದಕ್ಕಾಗಿ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಸಾವಿರಾರು ಜನರು ತೀರ್ಥಹಳ್ಳಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ತೀರ್ಥಹಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಧರ್ಮಸ್ಥಳ ನಮ್ಮ ಶ್ರದ್ಧಾ ಕೇಂದ್ರ. ಅದಕ್ಕೆ ಮಸಿ ಬಳಿಯಲು ಎಡಪಂಥದ ಕುತಂತ್ರಿಗಳು ಹಾಗೂ ಹಲವು ಜನರು ಇದ್ದಾರೆ. ಹಾಗಾಗಿ ಈ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು. ಏಕೆಂದರೆ ಇದರ ಹಿಂದೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕುಮ್ಮಕ್ಕುಗಳು ಅಡಗಿದೆ
ಇದರಲ್ಲಿ ಭಾಗಿಯಾದರು ಎಲ್ಲರೂ ಹೊರಗೆ ಬರಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ಮುಸುದಾರಿಯೇ ಈಗ ಉಲ್ಟಾ ಹೊಡೆಯುತ್ತಿದ್ದಾನೆ. ನಮ್ಮ ಎಸ್ಐಟಿ ತಂಡವು ಅವನು ತಂದ ತಲೆ ಬುರುಡೆಯನ್ನೇ ಎಫ್ ಎಸ್ ಐಎಲ್ ಕೊಟ್ಟಿದ್ದರೆ ಎಲ್ಲದು ಗೊತ್ತಾಗುತ್ತಿತ್ತು. ಪೊಲೀಸರಿಗೆ ಗೊತ್ತಿಲ್ಲದೆ ಹೆಣಗಳನ್ನ ಹೂಡಿದ್ದರೆ ಅವನೇ ಮೊದಲನೇ ಅಪರಾಧಿ.
ನಮ್ಮ ಪೊಲೀಸರಿಗೆ ಇವರನ್ನು ಮಟ್ಟ ಹಾಕುವ ಶಕ್ತಿ ಇದೆ
ಇನ್ನು ಮುಂದೆ ಈ ರೀತಿಯ ದೇವಸ್ಥಾನಗಳಿಗೆ ಅಪಪ್ರಚಾರ ಮಾಡುವ ಧೈರ್ಯ ಯಾರಿಗೂ ಬರಬಾರದು. ಭಾರತದ ಹಿಂದೂ ಸನಾತ ಮೌಲ್ಯಗಳು ಅವಮಾನ ಮಾಡುತ್ತಿದ್ದಾರೆ ಎಂದರು.
ಈ ಪ್ರಕರಣಕ್ಕೆ ಕೇರಳ ಲಿಂಕ್ ಇದೆ, ಎಡಪಂಥೀಯರು ಲಿಂಕ್ ಕೂಡ ಇದೆ, ಕೇರಳ ವಿಧಾನಸಭೆಯಲ್ಲಿ ನಿರ್ಣಯ ಆಗುತ್ತದೆ ಎಂದರೆ ಏನು ಅರ್ಥ? ಅವರಿಗೆ ಏನು ಇಲ್ಲಿ ಕೆಲಸ. ಭಕ್ತರಾಗಿ ಅವರು ಬಂದು ಹೋಗಬೇಕಿತ್ತು ಅದನ್ನು ಬಿಟ್ಟು ಬೇರೆ ರೀತಿಯಲ್ಲಿ ಮಾಡುತ್ತಿದ್ದಾರೆ. ಈ ಹೋರಾಟ ಜಾನಂದೋಲನ ವಾಗಿ ಪರಿವರ್ತನೆಗೊಳ್ಳುತ್ತಿದೆ. ಧರ್ಮಸ್ಥಳದ ಆ ಕುಟುಂಬದ ವಿರುದ್ಧ ಈ ಕೆಲಸ ಮಾಡುತ್ತಿದ್ದಾರೆ. ಶನಿವಾರ ನಾವು ಸಾವಿರಾರು ಕಾರುಗಳ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದೇವೆ ಎಂದು ಅವರು ನುಡಿದರು.
ಆ ಕುಟುಂಬದ ಪರ ಈಗ ಜನರಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ಕೈವಾಡ ಈ ಪ್ರಕರಣದಲ್ಲಿ ಕಂಡು ಬಂದಿದೆ. ಹಾಗಾಗಿ ಈ ಪ್ರಕರಣವನ್ನು ಎನ್ಐಎಗೆ ವಹಿಸಲೇಬೇಕು. ಇದರ ಹಿಂದೆ ಬೃಹತ್ ದುಡ್ಡಿನ ಗಂಟಿದೆ ಅದನ್ನು ಕೂಡ ತನಿಖೆ ನಡೆಸಬೇಕು. ಆಗ ಮಾತ್ರ ನಿಜ ಹೊರಗೆ ಬರುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು