11:01 PM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಉಪ ರಾಷ್ಟ್ರಪತಿ ಸ್ಥಾನದ ಎನ್ ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಭೇಟಿ

20/08/2025, 22:00

ನವದೆಹಲಿ(reporterkarnataka.com): ಎನ್.ಡಿ.ಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿದರು.
ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ರಾಧಾಕೃಷ್ಣನ್ ಅವರನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಗೌರವಪೂರ್ವಕವಾಗಿ ಬರಮಾಡಿಕೊಂಡರು.
ತಮ್ಮ ಹಾಗೂ ಪ್ರಧಾನಿಗಳ ನಡುವಿನ ಬಾಂಧವ್ಯವನ್ನು ಸ್ಮರಿಸಿದ ರಾಧಾಕೃಷ್ಣನ್ ಅವರು, ಎನ್ ಡಿಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಆಗಿರುವ ತಮಗೆ ಬೆಂಬಲ ನೀಡಿದ್ದಾಗಿ ಅಭ್ಯರ್ಥಿಯಾಗಿ ಧನ್ಯವಾದ ತಿಳಿಸಿದರು.


ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ಮಲ್ಲೇಶ್ ಬಾಬು ಮತ್ತು ಡಾ. ಸಿ.ಎನ್. ಮಂಜುನಾಥ್, ಜೆಡಿಎಸ್ ಪಕ್ಷದ ಹಿರಿಯ ನಾಯಕ ವೆಂಕಟರಾವ್ ನಾಡಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿನೋದ್ ತಾವಡೆ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳು ಹಾಗೂ ಕೇಂದ್ರ ಸಚಿವರು ಸಿ.ಪಿ. ರಾಧಾಕೃಷ್ಣನ್ ಅವರಿಗೆ ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು