2:09 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ: ಖಾಸಗಿ ವಾಹನದಲ್ಲಿ ಪ್ರಯಾಣ; ಬ್ರಹ್ಮಾವರ ಪೊಲೀಸರಿಂದ ವಿಚಾರಣೆ

21/08/2025, 11:51

ಉಜಿರೆ(reporterkarnataka.com): ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧಿಸಿದಂತೆ ತಿಮರೋಡಿ ಅವರನ್ನು ಅವರ ಉಜಿರೆ ಸಮೀಪದ ಅವರ ಮನೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಕ್ಕೆ ಮುನ್ನ ಸುಮಾರು 1 ತಾಸಿಗೂ ಅಧಿಕ ಕಾಲ ತಿಮರೋಡಿ ಮನೆ ಎದುರು ಹೈಡ್ರಾಮವೇ ನಡೆದಿದೆ. ವಾರಂಟ್ ಇಲ್ಲದೆ ಹೇಗೆ ಬಂಧನ ಮಾಡುತ್ತೀರಿ ಎಂದು ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಪ್ರಶ್ನಿಸಿದ್ದಾರೆ. ಮೊದಲು ಪೊಲೀಸರು ತಮ್ಮ ವಾಹನ ಹತ್ತುವಂತೆ ತಿಮರೋಡಿ ಅವರಿಗೆ ಸೂಚನೆ ನೀಡಿದರು. ಆದರೆ ಮಹೇಶ್ ತಿಮರೋಡಿ ಅವರು ಪೊಲೀಸ್ ವಾಹನದಲ್ಲಿ ನಾನು ಬರುವುದಿಲ್ಲ, ನನ್ನ ವಾಹನದಲ್ಲೇ ನಾನು ಪೊಲೀಸ್ ಠಾಣೆಗೆ ಆಗಮಿಸುತ್ತೇನೆ ಎಂದು ಪಟ್ಟು ಹಿಡಿದರು. ನಂತರ ಪೊಲೀಸರ ಬೆಂಗಾವಲಿನಲ್ಲಿ ತಿಮರೋಡಿ ಅವರು ತನ್ನ ಸ್ವಂತ ವಾಹನದಲ್ಲಿ ಪ್ರಯಾಣ ಬೆಳೆಸಿದರು. ಭಾರೀ ಸಂಖ್ಯೆಯಲ್ಲಿ ತಿಮರೋಡಿ ಬೆಂಬಲಿಗರು ನೆರೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು