4:01 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ: ಖಾಸಗಿ ವಾಹನದಲ್ಲಿ ಪ್ರಯಾಣ; ಬ್ರಹ್ಮಾವರ ಪೊಲೀಸರಿಂದ ವಿಚಾರಣೆ

21/08/2025, 11:51

ಉಜಿರೆ(reporterkarnataka.com): ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧಿಸಿದಂತೆ ತಿಮರೋಡಿ ಅವರನ್ನು ಅವರ ಉಜಿರೆ ಸಮೀಪದ ಅವರ ಮನೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಕ್ಕೆ ಮುನ್ನ ಸುಮಾರು 1 ತಾಸಿಗೂ ಅಧಿಕ ಕಾಲ ತಿಮರೋಡಿ ಮನೆ ಎದುರು ಹೈಡ್ರಾಮವೇ ನಡೆದಿದೆ. ವಾರಂಟ್ ಇಲ್ಲದೆ ಹೇಗೆ ಬಂಧನ ಮಾಡುತ್ತೀರಿ ಎಂದು ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಪ್ರಶ್ನಿಸಿದ್ದಾರೆ. ಮೊದಲು ಪೊಲೀಸರು ತಮ್ಮ ವಾಹನ ಹತ್ತುವಂತೆ ತಿಮರೋಡಿ ಅವರಿಗೆ ಸೂಚನೆ ನೀಡಿದರು. ಆದರೆ ಮಹೇಶ್ ತಿಮರೋಡಿ ಅವರು ಪೊಲೀಸ್ ವಾಹನದಲ್ಲಿ ನಾನು ಬರುವುದಿಲ್ಲ, ನನ್ನ ವಾಹನದಲ್ಲೇ ನಾನು ಪೊಲೀಸ್ ಠಾಣೆಗೆ ಆಗಮಿಸುತ್ತೇನೆ ಎಂದು ಪಟ್ಟು ಹಿಡಿದರು. ನಂತರ ಪೊಲೀಸರ ಬೆಂಗಾವಲಿನಲ್ಲಿ ತಿಮರೋಡಿ ಅವರು ತನ್ನ ಸ್ವಂತ ವಾಹನದಲ್ಲಿ ಪ್ರಯಾಣ ಬೆಳೆಸಿದರು. ಭಾರೀ ಸಂಖ್ಯೆಯಲ್ಲಿ ತಿಮರೋಡಿ ಬೆಂಬಲಿಗರು ನೆರೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು