1:42 PM Thursday21 - August 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು… ಸಂಸೆ ಯುವಕ ಆತ್ಮಹತ್ಯೆ ಪ್ರಕರಣ: ಕುದುರೆಮುಖ ಪೊಲೀಸ್ ಕಾನ್ ಸ್ಟೇಬಲ್ ಸಿದ್ದೇಶ್ ಗೋವಾದಲ್ಲಿ… ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ

ಇತ್ತೀಚಿನ ಸುದ್ದಿ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ: ಖಾಸಗಿ ವಾಹನದಲ್ಲಿ ಪ್ರಯಾಣ; ಬ್ರಹ್ಮಾವರ ಪೊಲೀಸರಿಂದ ವಿಚಾರಣೆ

21/08/2025, 11:51

ಉಜಿರೆ(reporterkarnataka.com): ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧಿಸಿದಂತೆ ತಿಮರೋಡಿ ಅವರನ್ನು ಅವರ ಉಜಿರೆ ಸಮೀಪದ ಅವರ ಮನೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಕ್ಕೆ ಮುನ್ನ ಸುಮಾರು 1 ತಾಸಿಗೂ ಅಧಿಕ ಕಾಲ ತಿಮರೋಡಿ ಮನೆ ಎದುರು ಹೈಡ್ರಾಮವೇ ನಡೆದಿದೆ. ವಾರಂಟ್ ಇಲ್ಲದೆ ಹೇಗೆ ಬಂಧನ ಮಾಡುತ್ತೀರಿ ಎಂದು ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಪ್ರಶ್ನಿಸಿದ್ದಾರೆ. ಮೊದಲು ಪೊಲೀಸರು ತಮ್ಮ ವಾಹನ ಹತ್ತುವಂತೆ ತಿಮರೋಡಿ ಅವರಿಗೆ ಸೂಚನೆ ನೀಡಿದರು. ಆದರೆ ಮಹೇಶ್ ತಿಮರೋಡಿ ಅವರು ಪೊಲೀಸ್ ವಾಹನದಲ್ಲಿ ನಾನು ಬರುವುದಿಲ್ಲ, ನನ್ನ ವಾಹನದಲ್ಲೇ ನಾನು ಪೊಲೀಸ್ ಠಾಣೆಗೆ ಆಗಮಿಸುತ್ತೇನೆ ಎಂದು ಪಟ್ಟು ಹಿಡಿದರು. ನಂತರ ಪೊಲೀಸರ ಬೆಂಗಾವಲಿನಲ್ಲಿ ತಿಮರೋಡಿ ಅವರು ತನ್ನ ಸ್ವಂತ ವಾಹನದಲ್ಲಿ ಪ್ರಯಾಣ ಬೆಳೆಸಿದರು. ಭಾರೀ ಸಂಖ್ಯೆಯಲ್ಲಿ ತಿಮರೋಡಿ ಬೆಂಬಲಿಗರು ನೆರೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು