ಇತ್ತೀಚಿನ ಸುದ್ದಿ
ಸುಳ್ಯದ ಪಿಜಿಯಲ್ಲಿ ಕೊಡಗಿನ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
21/08/2025, 22:20

ಗಿರಿಧರ್ ಕೊಂಪುಳಿರ ಸುಳ್ಯ
info.reporterkarnataka@gmail.com
ಸುಳ್ಯದಲ್ಲಿ ಕಾಲೇಜು ಶಿಕ್ಷಣ ಪಡೆಯುತ್ತಿದ್ದ ಕೊಡಗಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಅಭಿ(20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದು ಕೊಡಗು ಜಿಲ್ಲೆಯ ವೀರಾಜಪೇಟೆ ಕಲ್ಲುಬಾಣೆ ನಿವಾಸಿ ವಿಜು ಹಾಗೂ ಸುಮತಿ ದಂಪತಿಯ ಪುತ್ರ. ಈತ ಸುಳ್ಯದ ಕೆವಿಜಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪಿಜಿಯಲ್ಲಿದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದು, ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.