6:13 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಶಿವಳ್ಳಿ ಸಮುದಾಯದ ಸಾತ್ವಿಕ ಅಹಾರ ಸಂಸ್ಕೃತಿ ಇಷ್ಟ: ಪತ್ರಕರ್ತ ರವೀಂದ್ರ ಜೋಶಿ

21/08/2025, 22:26

ಮಂಗಳೂರು(reporterkarnataka.com): ಶಿವಳ್ಳಿ ನಂಬಿಕಸ್ತ ಸಮುದಾಯ, ವಿಶಿಷ್ಟ ಆಹಾರ ಸಂಸ್ಕೃತಿಯ ಶಿವಳ್ಳಿ ಬ್ರಾಹ್ಮಣರ ಖಾದ್ಯಗಳು ತುಂಬಾ ರುಚಿಕರ ಎಂದು ಸಾಹಿತಿ, ಪತ್ರಕರ್ತ ರವೀಂದ್ರ ಜೋಶಿ ಹೇಳಿದರು.
ನಗರದ ಕದ್ರಿ ಶ್ರೀಮಾತಾಕೃಪಾದಲ್ಲಿ ಶಿವಳ್ಳಿ ಸ್ಪಂದನ ಕದ್ರಿ ವಲಯದ ವತಿಯಿಂದ ನಡೆದ ಆಟಿ ಕೂಟ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸಾತ್ವಿಕ ಆಹಾರದಿಂದ ಜನರಲ್ಲಿ ಸಾತ್ವಿಕತೆ ಹೆಚ್ಚುತ್ತದೆ. ಶಿವಳ್ಳಿ ಹೆಸರಿನ ಹೋಟೆಲ್‌ಗಳಲ್ಲಿ ಆಹಾರದಲ್ಲಿ ಮೋಸ ಇರೋದಿಲ್ಲ, ಹೊಟ್ಟೆಗೆ ಸಮಸ್ಯೆ ಆಗುವುದಿಲ್ಲ. ವಿಶಿಷ್ಟ ರುಚಿ ಇರುತ್ತವೆ. ಆದರೆ ಅಂತಹ ಹೋಟೆಲ್‌ಗಳು ಈಗ ನಶಿಸುತ್ತಿವೆ ಎಂದರು. ಸಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಮಯ ಕಳೆದರೆ ಖಿನ್ನತೆ ಉಂಟಾಗುತ್ತದೆ. ಮಾನವ ಸಂಘಜೀವಿ ಇದೇ ರೀತಿಯ ಸಮುದಾಯ ಚಟುವಟಿಕೆಗಳಲ್ಲಿ ಭಾಗಿಯಾಗುವ ಮೂಲಕ ಮಾನಸಿ, ದೈಹಿಕ ಆರೋಗ್ಯ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಕದ್ರಿ ದೇವಸ್ಥಾನ ಅರ್ಚಕರಾದ ವೇದಮೂರ್ತಿ ಕೃಷ್ಣ ಅಡಿಗರು ಪ್ರವಚನ ನೀಡಿ, ಆಟಿ ತಿಂಗಳಿನಲ್ಲಿ ಮಹಿಳೆಯರು ಹೊಸ್ತಿಲು ಬರೆಯುವ ಕ್ರಮದಿಂದ ಪ್ರಾರಂಭಿಸಿ ತುಳುನಾಡಿನಲ್ಲಿ ಆಟಿ ತಿಂಗಳನ್ನು ವಿಶೇಷ ಕ್ರಮದಿಂದ ಆಚರಿಸುತ್ತಾರೆ. ವಿವಿಧ ಆಚರಣೆಗಳಿವೆ, ಇದಕ್ಕೆ ವೈಜ್ಞಾನಿಕ/ಶಾಸ್ತ್ರದ ಹಿನ್ನೆಲೆ ಇದೆ ಎಂದರು.
ಶಿವಳ್ಳಿ ಸ್ಪಂದನ ಮಂಗಳೂರು ತಾಲೂಕಿನ ಅಧ್ಯಕ್ಷ ವಾಸುದೇವ ಭಟ್, ಕಾರ್ಯದರ್ಶಿ ಕೃಷ್ಣ ಭಟ್, ಉಪಾಧ್ಯಕ್ಷ ರಾಮಚಂದ್ರ ಭಟ್ ಎಲ್ಲೂರು, ಆಡಳಿತ ಮಂಡಳಿಯ ಸದಸ್ಯ ನೋಡು ಶ್ರೀನಿವಾಸ ಆಚಾರ್, ಮಾಧ್ಯಮ ಸಲಹೆಗಾರ ಜಿತೇಂದ್ರ ಕುಂದೇಶ್ವರ, ಧಾರ್ಮಿಕ ಪರಿಷತ್‌ ಮಾಜಿ ಸದಸ್ಯ ಗಿರಿಪ್ರಕಾಶ್‌ ತಂತ್ರಿ, ಶಿವಳ್ಳಿ ತಾಲೂಕು ಮಹಿಳಾಘಟಕದ ಅಧ್ಯಕ್ಷೆ ರಮಾಮಣಿ, ವಲಯ ಅಧ್ಯಕ್ಷೆ ಗೀತ ಬೆಳ್ಳೆ, ಕಾರ್ಯದರ್ಶಿ ಶೀಲಾ ಜಯಪ್ರಕಾಶ, ಕೋಶಾಧಿಕಾರಿ ರವಿಕಾಂತ ಭಟ್ ಇದ್ದರು.
ಅನಂತ ಭಟ್ ಮತ್ತು ರಾಮಚಂದ್ರ ಭಟ್ ಎಲ್ಲೂರು ಕಾರ್ಯಕ್ರಮ ನಿರೂಪಿಸಿದರು. ಆ ನಂತರ ಆಟಿ ತಿಂಗಳ ವಿಶೇಷ ಖಾದ್ಯ ವನ್ನು ತಯಾರಿಸಿದ ಮಹಿಳಾ ಸದಸ್ಯರನ್ನು ಸನ್ಮಾನಿಸಲಾಯಿತು. ಖಾದ್ಯಗಳನ್ನು ಎಲ್ಲಾ ಸದಸ್ಯರಿಗೆ, ಅತಿಥಿಗಳಿಗೆ ಉಣಬಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು