3:14 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಶಿವಳ್ಳಿ ಸಮುದಾಯದ ಸಾತ್ವಿಕ ಅಹಾರ ಸಂಸ್ಕೃತಿ ಇಷ್ಟ: ಪತ್ರಕರ್ತ ರವೀಂದ್ರ ಜೋಶಿ

21/08/2025, 22:26

ಮಂಗಳೂರು(reporterkarnataka.com): ಶಿವಳ್ಳಿ ನಂಬಿಕಸ್ತ ಸಮುದಾಯ, ವಿಶಿಷ್ಟ ಆಹಾರ ಸಂಸ್ಕೃತಿಯ ಶಿವಳ್ಳಿ ಬ್ರಾಹ್ಮಣರ ಖಾದ್ಯಗಳು ತುಂಬಾ ರುಚಿಕರ ಎಂದು ಸಾಹಿತಿ, ಪತ್ರಕರ್ತ ರವೀಂದ್ರ ಜೋಶಿ ಹೇಳಿದರು.
ನಗರದ ಕದ್ರಿ ಶ್ರೀಮಾತಾಕೃಪಾದಲ್ಲಿ ಶಿವಳ್ಳಿ ಸ್ಪಂದನ ಕದ್ರಿ ವಲಯದ ವತಿಯಿಂದ ನಡೆದ ಆಟಿ ಕೂಟ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸಾತ್ವಿಕ ಆಹಾರದಿಂದ ಜನರಲ್ಲಿ ಸಾತ್ವಿಕತೆ ಹೆಚ್ಚುತ್ತದೆ. ಶಿವಳ್ಳಿ ಹೆಸರಿನ ಹೋಟೆಲ್‌ಗಳಲ್ಲಿ ಆಹಾರದಲ್ಲಿ ಮೋಸ ಇರೋದಿಲ್ಲ, ಹೊಟ್ಟೆಗೆ ಸಮಸ್ಯೆ ಆಗುವುದಿಲ್ಲ. ವಿಶಿಷ್ಟ ರುಚಿ ಇರುತ್ತವೆ. ಆದರೆ ಅಂತಹ ಹೋಟೆಲ್‌ಗಳು ಈಗ ನಶಿಸುತ್ತಿವೆ ಎಂದರು. ಸಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಮಯ ಕಳೆದರೆ ಖಿನ್ನತೆ ಉಂಟಾಗುತ್ತದೆ. ಮಾನವ ಸಂಘಜೀವಿ ಇದೇ ರೀತಿಯ ಸಮುದಾಯ ಚಟುವಟಿಕೆಗಳಲ್ಲಿ ಭಾಗಿಯಾಗುವ ಮೂಲಕ ಮಾನಸಿ, ದೈಹಿಕ ಆರೋಗ್ಯ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಕದ್ರಿ ದೇವಸ್ಥಾನ ಅರ್ಚಕರಾದ ವೇದಮೂರ್ತಿ ಕೃಷ್ಣ ಅಡಿಗರು ಪ್ರವಚನ ನೀಡಿ, ಆಟಿ ತಿಂಗಳಿನಲ್ಲಿ ಮಹಿಳೆಯರು ಹೊಸ್ತಿಲು ಬರೆಯುವ ಕ್ರಮದಿಂದ ಪ್ರಾರಂಭಿಸಿ ತುಳುನಾಡಿನಲ್ಲಿ ಆಟಿ ತಿಂಗಳನ್ನು ವಿಶೇಷ ಕ್ರಮದಿಂದ ಆಚರಿಸುತ್ತಾರೆ. ವಿವಿಧ ಆಚರಣೆಗಳಿವೆ, ಇದಕ್ಕೆ ವೈಜ್ಞಾನಿಕ/ಶಾಸ್ತ್ರದ ಹಿನ್ನೆಲೆ ಇದೆ ಎಂದರು.
ಶಿವಳ್ಳಿ ಸ್ಪಂದನ ಮಂಗಳೂರು ತಾಲೂಕಿನ ಅಧ್ಯಕ್ಷ ವಾಸುದೇವ ಭಟ್, ಕಾರ್ಯದರ್ಶಿ ಕೃಷ್ಣ ಭಟ್, ಉಪಾಧ್ಯಕ್ಷ ರಾಮಚಂದ್ರ ಭಟ್ ಎಲ್ಲೂರು, ಆಡಳಿತ ಮಂಡಳಿಯ ಸದಸ್ಯ ನೋಡು ಶ್ರೀನಿವಾಸ ಆಚಾರ್, ಮಾಧ್ಯಮ ಸಲಹೆಗಾರ ಜಿತೇಂದ್ರ ಕುಂದೇಶ್ವರ, ಧಾರ್ಮಿಕ ಪರಿಷತ್‌ ಮಾಜಿ ಸದಸ್ಯ ಗಿರಿಪ್ರಕಾಶ್‌ ತಂತ್ರಿ, ಶಿವಳ್ಳಿ ತಾಲೂಕು ಮಹಿಳಾಘಟಕದ ಅಧ್ಯಕ್ಷೆ ರಮಾಮಣಿ, ವಲಯ ಅಧ್ಯಕ್ಷೆ ಗೀತ ಬೆಳ್ಳೆ, ಕಾರ್ಯದರ್ಶಿ ಶೀಲಾ ಜಯಪ್ರಕಾಶ, ಕೋಶಾಧಿಕಾರಿ ರವಿಕಾಂತ ಭಟ್ ಇದ್ದರು.
ಅನಂತ ಭಟ್ ಮತ್ತು ರಾಮಚಂದ್ರ ಭಟ್ ಎಲ್ಲೂರು ಕಾರ್ಯಕ್ರಮ ನಿರೂಪಿಸಿದರು. ಆ ನಂತರ ಆಟಿ ತಿಂಗಳ ವಿಶೇಷ ಖಾದ್ಯ ವನ್ನು ತಯಾರಿಸಿದ ಮಹಿಳಾ ಸದಸ್ಯರನ್ನು ಸನ್ಮಾನಿಸಲಾಯಿತು. ಖಾದ್ಯಗಳನ್ನು ಎಲ್ಲಾ ಸದಸ್ಯರಿಗೆ, ಅತಿಥಿಗಳಿಗೆ ಉಣಬಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು