9:30 AM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

Chikkamagaluru | ಮಲೆನಾಡ ಗಾಂಧಿ ದಿ. ಎಚ್.ಜಿ. ಗೋವಿಂದೇಗೌಡರ ಮನೆಯಿಂದ ಭಾರೀ ಕಳವು: ಮನೆಗೆಲಸಕ್ಕಿದ್ದ ದಂಪತಿಯಿಂದಲ್ಲೇ ಕೃತ್ಯ!

22/08/2025, 10:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@ail.com

ಮಲೆನಾಡ ಗಾಂಧಿ ಎಂದೇ ಖ್ಯಾತರಾಗಿರುವ ದಿ. ಎಚ್.ಜಿ. ಗೋವಿಂದೇಗೌಡ ಅವರ ಕೊಪ್ಪ ತಾಲೂಕಿನ ಮಣಿಪುರ ಎಸ್ಟೇಟ್ ಮನೆಯಲ್ಲಿ ಕಳ್ಳತನ ನಡೆದಿದ್ದು, ಸುಮಾರು 7 ಲಕ್ಷ ರೂ. ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಆಗಿದೆ

ಅನ್ನ ಕೊಟ್ಟ ಮನೆಗೆ ಕನ್ನವನ್ನು ನೇಪಾಳ ಮೂಲದ ದಂಪತಿ ಮಾಡಿದ್ದಾರೆ. ಮಾಜಿ ಸಚಿವ ದಿ. ಗೋವಿಂದಗೌಡರ ಮನೆಯಲ್ಲಿ ಮನೆಗೆಲಸಕ್ಕಿದ್ದ ದಂಪತಿ ಕಳ್ಳತನ ಮಾಡಿ ನಗದು ಸಹಿತ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಅಂದಾಜು 7 ಲಕ್ಷಕ್ಕೂ ಅಧಿಕ ನಗದು, ಚಿನ್ನಾಭರಣ ದೋಚಿದ್ದಾರೆ.
ಗೋವಿಂದಗೌಡರ ಪುತ್ರ ವೆಂಕಟೇಶ್ ವಾಸವಿರುವ ಕೊಪ್ಪ ತಾಲೂಕಿನ ಮಣಿಪುರ ಎಸ್ಟೇಟ್ ನಲ್ಲಿ ಕಳ್ಳತನ ನಡೆದಿದೆ. ಕಳೆದ 15 ದಿನಗಳ ಹಿಂದಷ್ಟೆ ಕೆಲಸಕ್ಕೆ ಸೇರಿದ ನೇಪಾಳ ಮೂಲದ ದಂಪತಿ ಈ ಕೃತ್ಯವೆಸಗಿದ್ದಾರೆ.
ಮನೆಯವರು ನಿದ್ದೆಗೆ ಜಾರಿದಾಗ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು