8:06 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

Chikkamagaluru | ಮಲೆನಾಡ ಗಾಂಧಿ ದಿ. ಎಚ್.ಜಿ. ಗೋವಿಂದೇಗೌಡರ ಮನೆಯಿಂದ ಭಾರೀ ಕಳವು: ಮನೆಗೆಲಸಕ್ಕಿದ್ದ ದಂಪತಿಯಿಂದಲ್ಲೇ ಕೃತ್ಯ!

22/08/2025, 10:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@ail.com

ಮಲೆನಾಡ ಗಾಂಧಿ ಎಂದೇ ಖ್ಯಾತರಾಗಿರುವ ದಿ. ಎಚ್.ಜಿ. ಗೋವಿಂದೇಗೌಡ ಅವರ ಕೊಪ್ಪ ತಾಲೂಕಿನ ಮಣಿಪುರ ಎಸ್ಟೇಟ್ ಮನೆಯಲ್ಲಿ ಕಳ್ಳತನ ನಡೆದಿದ್ದು, ಸುಮಾರು 7 ಲಕ್ಷ ರೂ. ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಆಗಿದೆ

ಅನ್ನ ಕೊಟ್ಟ ಮನೆಗೆ ಕನ್ನವನ್ನು ನೇಪಾಳ ಮೂಲದ ದಂಪತಿ ಮಾಡಿದ್ದಾರೆ. ಮಾಜಿ ಸಚಿವ ದಿ. ಗೋವಿಂದಗೌಡರ ಮನೆಯಲ್ಲಿ ಮನೆಗೆಲಸಕ್ಕಿದ್ದ ದಂಪತಿ ಕಳ್ಳತನ ಮಾಡಿ ನಗದು ಸಹಿತ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಅಂದಾಜು 7 ಲಕ್ಷಕ್ಕೂ ಅಧಿಕ ನಗದು, ಚಿನ್ನಾಭರಣ ದೋಚಿದ್ದಾರೆ.
ಗೋವಿಂದಗೌಡರ ಪುತ್ರ ವೆಂಕಟೇಶ್ ವಾಸವಿರುವ ಕೊಪ್ಪ ತಾಲೂಕಿನ ಮಣಿಪುರ ಎಸ್ಟೇಟ್ ನಲ್ಲಿ ಕಳ್ಳತನ ನಡೆದಿದೆ. ಕಳೆದ 15 ದಿನಗಳ ಹಿಂದಷ್ಟೆ ಕೆಲಸಕ್ಕೆ ಸೇರಿದ ನೇಪಾಳ ಮೂಲದ ದಂಪತಿ ಈ ಕೃತ್ಯವೆಸಗಿದ್ದಾರೆ.
ಮನೆಯವರು ನಿದ್ದೆಗೆ ಜಾರಿದಾಗ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು