11:15 AM Friday22 - August 2025
ಬ್ರೇಕಿಂಗ್ ನ್ಯೂಸ್
ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು… ಸಂಸೆ ಯುವಕ ಆತ್ಮಹತ್ಯೆ ಪ್ರಕರಣ: ಕುದುರೆಮುಖ ಪೊಲೀಸ್ ಕಾನ್ ಸ್ಟೇಬಲ್ ಸಿದ್ದೇಶ್ ಗೋವಾದಲ್ಲಿ…

ಇತ್ತೀಚಿನ ಸುದ್ದಿ

ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು ದುರಂತ

22/08/2025, 10:56

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ತಾಲ್ಲೂಕಿನ ಕಣ್ಣಂಗಾಲ ಗ್ರಾಮದಲ್ಲಿ ಸಂಭವಿಸಿದ ಕಾರು ಮತ್ತು ಆಟೋ ನಡುವಿನ ಅಪಘಾತದಲ್ಲಿ ಆಟೋ ಚಾಲಕ ಸಾವನಪ್ಪಿರುವ ಘಟನೆ ನಡೆದಿದೆ.

ಚೆoಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಣಗೇರಿ ಗ್ರಾಮದ ಬಾಳಕೇರಿ ಪೈಸಾರಿ ನಿವಾಸಿ ಪೊಣಿ ಎಂಬುವವರ ಪುತ್ರ ಹೆಚ್. ಬಿ ವಿನೋದ್ ಮೃತ ದುರ್ದೈವಿಯಾಗಿದ್ದಾನೆ. ಮೃತ ವಿನೋದ್ ಕೂಲಿ ಕೆಲಸ ಮಾಡಿಕೊಂಡಿದ್ದು, ಈ ಹಿಂದೆ ಆಟೋ ಓಡಿಸಿಕೊಂಡಿದ್ದರು. ವಿನೋದ್ ಸ್ನೇಹಿತ ದೇವಯ್ಯ ಅನಾರೋಗ್ಯದಿಂದ ಬಳುತ್ತಿದ್ದರು, ದೇವಯ್ಯ ಓದುಸುತ್ತಿದ್ದ ಆಟೋ ಓಡಿಸಲಾಗದೆ ಒಂಟಿ ಅಂಗಡಿ ಗ್ರಾಮದಲ್ಲಿ ನಿಲ್ಲಿಸಲಾಗಿತ್ತು, ಈ ಹಿಂದೆ ಆಟೋ ಓಡಿಸಿಕೊಂಡಿದ್ದ ಕಾರಣ ದೇವಯ್ಯ ತನ್ನ ಸ್ನೇಹಿತನಿಗೆ ತನ್ನ ಆಟೋವನ್ನು ಮನೆಗೆ ತರಲು ತಿಳಿಸಿದ್ದರು, ಅದರಂತೆ ಒಂಟಿಯoಗಡಿಯಿಂದ ವಿನೋದ್ ಆಟೋ ತರುತ್ತಿದ್ದ ಸಂದರ್ಭ ಕಣ್ಣಂಗಾಲ -ಚoಬೆಬೆಳ್ಳೂರು ರಸ್ತೆಯಲ್ಲಿ ಬರುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಸ್ವಿಫ್ಟ್ ಕಾರು ಆಟೋಕ್ಕೆ ಅಪ್ಪಳಿಸಿದ್ದು ತಲೆಗೆ ಗಂಭೀರ ಗಾಯಗೊಂಡ ವಿನೋದ್ ಮೃತಪಟ್ಟಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಕಟ್ಟೆಮಾಡು ಗ್ರಾಮದ ನಿವಾಸಿ ತಮನ್ ಪೊನ್ನಣ್ಣ ವಿರುದ್ಧ ಪ್ರಕರಣ ದಾಖಲು ಮಾಡಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು