8:12 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು ದುರಂತ

22/08/2025, 10:56

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ತಾಲ್ಲೂಕಿನ ಕಣ್ಣಂಗಾಲ ಗ್ರಾಮದಲ್ಲಿ ಸಂಭವಿಸಿದ ಕಾರು ಮತ್ತು ಆಟೋ ನಡುವಿನ ಅಪಘಾತದಲ್ಲಿ ಆಟೋ ಚಾಲಕ ಸಾವನಪ್ಪಿರುವ ಘಟನೆ ನಡೆದಿದೆ.

ಚೆoಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಣಗೇರಿ ಗ್ರಾಮದ ಬಾಳಕೇರಿ ಪೈಸಾರಿ ನಿವಾಸಿ ಪೊಣಿ ಎಂಬುವವರ ಪುತ್ರ ಹೆಚ್. ಬಿ ವಿನೋದ್ ಮೃತ ದುರ್ದೈವಿಯಾಗಿದ್ದಾನೆ. ಮೃತ ವಿನೋದ್ ಕೂಲಿ ಕೆಲಸ ಮಾಡಿಕೊಂಡಿದ್ದು, ಈ ಹಿಂದೆ ಆಟೋ ಓಡಿಸಿಕೊಂಡಿದ್ದರು. ವಿನೋದ್ ಸ್ನೇಹಿತ ದೇವಯ್ಯ ಅನಾರೋಗ್ಯದಿಂದ ಬಳುತ್ತಿದ್ದರು, ದೇವಯ್ಯ ಓದುಸುತ್ತಿದ್ದ ಆಟೋ ಓಡಿಸಲಾಗದೆ ಒಂಟಿ ಅಂಗಡಿ ಗ್ರಾಮದಲ್ಲಿ ನಿಲ್ಲಿಸಲಾಗಿತ್ತು, ಈ ಹಿಂದೆ ಆಟೋ ಓಡಿಸಿಕೊಂಡಿದ್ದ ಕಾರಣ ದೇವಯ್ಯ ತನ್ನ ಸ್ನೇಹಿತನಿಗೆ ತನ್ನ ಆಟೋವನ್ನು ಮನೆಗೆ ತರಲು ತಿಳಿಸಿದ್ದರು, ಅದರಂತೆ ಒಂಟಿಯoಗಡಿಯಿಂದ ವಿನೋದ್ ಆಟೋ ತರುತ್ತಿದ್ದ ಸಂದರ್ಭ ಕಣ್ಣಂಗಾಲ -ಚoಬೆಬೆಳ್ಳೂರು ರಸ್ತೆಯಲ್ಲಿ ಬರುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಸ್ವಿಫ್ಟ್ ಕಾರು ಆಟೋಕ್ಕೆ ಅಪ್ಪಳಿಸಿದ್ದು ತಲೆಗೆ ಗಂಭೀರ ಗಾಯಗೊಂಡ ವಿನೋದ್ ಮೃತಪಟ್ಟಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಕಟ್ಟೆಮಾಡು ಗ್ರಾಮದ ನಿವಾಸಿ ತಮನ್ ಪೊನ್ನಣ್ಣ ವಿರುದ್ಧ ಪ್ರಕರಣ ದಾಖಲು ಮಾಡಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು