8:35 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

Mangaluru | ‘ಕುಡ್ಲದ ಪಿಲಿ ಪರ್ಬ-ಸೀಸನ್ 4’: ಆಮಂತ್ರಣ ಪತ್ರಿಕೆ ಬಿಡುಗಡೆ

23/08/2025, 21:11

ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಇದೇ ಸೆ.30 ರಂದು ನಡೆಯಲಿರುವ ‘ಕುಡ್ಲದ ಪಿಲಿ ಪರ್ಬ-ಸೀಸನ್ 4’ ಇದರ ಆಮಂತ್ರಣ ಪತ್ರಿಕೆಯನ್ನು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಬಿಡುಗಡೆಗೊಳಿಸಲಾಯಿತು.
ಬಳಿಕ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಗಿರಿಧ‌ರ್ ಶೆಟ್ಟಿ ಅವರು, ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದು, ಪ್ರತಿ ವರ್ಷದಂತೆ ನಗರದ ಕೇಂದ್ರ ಮೈದಾನದಲ್ಲಿ ಈ ಬಾರಿಯ ಪಿಲಿಪರ್ಬವು ಸಂಭ್ರಮದಿಂದ ನಡೆಯಲಿದೆ. ನಮ್ಮ ಪ್ರತಿಷ್ಠಾನದ ಮೂಲ ಉದ್ದೇಶ ತುಳುನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಆಯೋಜನೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ರೀತಿಯ ಅನುಮತಿ ಪಡೆಯಲಾಗಿದ್ದು ಸಾರ್ವಜನಿಕರೆಲ್ಲರಿಗೂ ಸಂಭ್ರಮದ ಪಿಲಿಪರ್ಬಕ್ಕೆ ಸ್ವಾಗತ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ದಿವಾಕರ್ ಪಾಂಡೇಶ್ವರ ಪ್ರಮುಖರಾದ ನರೇಶ್ ಶೆಣೈ, ಅಶ್ವಿತ್ ಕೊಟ್ಟಾರಿ, ಲಲಿತ್ ಮೆಂಡನ್, ಕಿರಣ್ ಶೆಣೈ, ಜಗದೀಶ್ ಕದ್ರಿ, ಸಂಜಯ್ ಪೈ, ಸಹಾನ್ ಕೋಡಿಕೆರೆ, ಸತೀಶ್ ಮುಂಡಕಾಜೆ, ನರೇಶ್ ಪ್ರಭು, ಚೇತನ್ ಕಾಮತ್, ಅನಿಲ್ ಬೋಳೂರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು