7:45 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು; 2103.35 ಕೆಜಿ ಬೆಳ್ತಿಗೆ, 467.10 ಕೆಜಿ ಕುಚ್ಚಲಕ್ಕಿ ವಶ; ಇಬ್ಬರ ವಿರುದ್ಧ ಕೇಸು ದಾಖಲು

24/08/2025, 14:01

ಬಂಟ್ವಾಳ(reporterkarnataka.com): ಇಲ್ಲಿನ ಗೊಳ್ತ ಮಜಲು ಗ್ರಾಮದಲ್ಲಿ ಪಡಿತರ ಅಕ್ಕಿಯನ್ನು ಆಕ್ರಮವಾಗಿ ದಾಸ್ತಾನಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 2103.35 ಕೆಜಿ ಬೆಳ್ತಿಗೆ ಅಕ್ಕಿ ಮತ್ತು 467.10 ಕೆಜಿ ಕುಚ್ಚಲಕ್ಕಿಯನ್ನು ಆಹಾರ ಇಲಾಖೆ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದು, ಇಬ್ಬರ ಮೇಲೆ ಕೇಸು ದಾಖಲಿಸಲಾಗಿದೆ.

ಗೋಳ್ತಮಜಲು ಗ್ರಾಮದ ಪಟ್ಟೆಕೋಡಿ ಎಂಬಲ್ಲಿರುವ ಅಂಗಡಿ ಕಟ್ಟಡವೊಂದರಲ್ಲಿ, ಪಡಿತರ ಅಕ್ಕಿಯನ್ನು ಆಕ್ರಮವಾಗಿ ದಾಸ್ತಾನು ಇಡಲಾಗಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಪ್ರಕರಣದ ಪಿರ್ಯಾದಿದಾರರಾದ ಬಂಟ್ವಾಳ ತಾಲೂಕು ಕಚೇರಿಯ ಆಹಾರ ನಿರೀಕ್ಷಕರಾದ ಎ. ಪ್ರಶಾಂತ ಶೆಟ್ಟಿ ಅವರು, ಬಂಟ್ವಾಳ ನಗರ ಠಾಣಾ ಪೊಲೀಸರ ಸಹಕಾರದೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ್ದರು. ಆರೋಪಿ ಗೋಳ್ತಮಜಲು ನಿವಾಸಿ ಉಮ್ಮರಬ್ಬ ಎಂಬವರು ಕಟ್ಟಡವೊಂದರಲ್ಲಿ ಒಟ್ಟು 64 ಗೋಣಿ ಚೀಲಗಳಲ್ಲಿ ರೂ 58,288/-ಮೌಲ್ಯದ 2103.35 ಕೆ.ಜಿ ಬೆಳ್ತಿಗೆ ಅಕ್ಕಿ ಮತ್ತು 467.10 ಕೆ.ಜಿ ಕುಚ್ಚಲಕ್ಕಿಯನ್ನು ಆಕ್ರಮವಾಗಿ ಸಂಗ್ರಹಿಸಿಟ್ಟಿರುವುದು ಬೆಳಕಿಗೆ ಬಂದಿದೆ. ಈ ಅಕ್ಕಿಯನ್ನು ಕೆಎ.19.ಡಿ.3896ನೇ ಆಟೋರಿಕ್ಷಾದಲ್ಲಿ ಸಾಗಾಟ ಮಾಡಲು ಸಿದ್ದತೆ ನಡೆಸಿರುವುದು ಕಂಡು ಬಂದಿತ್ತು. ಈ ಕೃತ್ಯದಲ್ಲಿ ಆರೋಪಿಯ ಜೊತೆಗೆ ಇನ್ನೋರ್ವ ಗೋಳ್ತಮಜಲು ನಿವಾಸಿ ರಫೀಕ್ ಎಂಬಾತನೂ ಭಾಗಿಯಾಗಿದ್ದು, ಸ್ಥಳದಲ್ಲಿದ್ದ ಅಕ್ಕಿಯ ಗೋಣಿ ಚೀಲಗಳನ್ನು, ಸಾಗಾಟ ಮಾಡಲು ಬಳಸಿದ ಆಟೋರಿಕ್ಷಾ, ತೂಕದ ಯಂತ್ರ, ಖಾಲಿ ಗೋಣಿ ಚೀಲಗಳು ಸೇರಿದಂತೆ ಇತರೆ ಸೊತ್ತುಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಸ್ವಾಧೀನಪಡಿಸಿಕೊಂಡು, ಆರೋಪಿಗಳ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ: 96/2025, ಕಲಂ 3, 7 ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕಲಂ 18 ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ದತಿ ( ನಿಯಂತ್ರಣ ಆದೇಶ) 2016 ರಂತೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು