8:28 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು; 2103.35 ಕೆಜಿ ಬೆಳ್ತಿಗೆ, 467.10 ಕೆಜಿ ಕುಚ್ಚಲಕ್ಕಿ ವಶ; ಇಬ್ಬರ ವಿರುದ್ಧ ಕೇಸು ದಾಖಲು

24/08/2025, 14:01

ಬಂಟ್ವಾಳ(reporterkarnataka.com): ಇಲ್ಲಿನ ಗೊಳ್ತ ಮಜಲು ಗ್ರಾಮದಲ್ಲಿ ಪಡಿತರ ಅಕ್ಕಿಯನ್ನು ಆಕ್ರಮವಾಗಿ ದಾಸ್ತಾನಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 2103.35 ಕೆಜಿ ಬೆಳ್ತಿಗೆ ಅಕ್ಕಿ ಮತ್ತು 467.10 ಕೆಜಿ ಕುಚ್ಚಲಕ್ಕಿಯನ್ನು ಆಹಾರ ಇಲಾಖೆ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದು, ಇಬ್ಬರ ಮೇಲೆ ಕೇಸು ದಾಖಲಿಸಲಾಗಿದೆ.

ಗೋಳ್ತಮಜಲು ಗ್ರಾಮದ ಪಟ್ಟೆಕೋಡಿ ಎಂಬಲ್ಲಿರುವ ಅಂಗಡಿ ಕಟ್ಟಡವೊಂದರಲ್ಲಿ, ಪಡಿತರ ಅಕ್ಕಿಯನ್ನು ಆಕ್ರಮವಾಗಿ ದಾಸ್ತಾನು ಇಡಲಾಗಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಪ್ರಕರಣದ ಪಿರ್ಯಾದಿದಾರರಾದ ಬಂಟ್ವಾಳ ತಾಲೂಕು ಕಚೇರಿಯ ಆಹಾರ ನಿರೀಕ್ಷಕರಾದ ಎ. ಪ್ರಶಾಂತ ಶೆಟ್ಟಿ ಅವರು, ಬಂಟ್ವಾಳ ನಗರ ಠಾಣಾ ಪೊಲೀಸರ ಸಹಕಾರದೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ್ದರು. ಆರೋಪಿ ಗೋಳ್ತಮಜಲು ನಿವಾಸಿ ಉಮ್ಮರಬ್ಬ ಎಂಬವರು ಕಟ್ಟಡವೊಂದರಲ್ಲಿ ಒಟ್ಟು 64 ಗೋಣಿ ಚೀಲಗಳಲ್ಲಿ ರೂ 58,288/-ಮೌಲ್ಯದ 2103.35 ಕೆ.ಜಿ ಬೆಳ್ತಿಗೆ ಅಕ್ಕಿ ಮತ್ತು 467.10 ಕೆ.ಜಿ ಕುಚ್ಚಲಕ್ಕಿಯನ್ನು ಆಕ್ರಮವಾಗಿ ಸಂಗ್ರಹಿಸಿಟ್ಟಿರುವುದು ಬೆಳಕಿಗೆ ಬಂದಿದೆ. ಈ ಅಕ್ಕಿಯನ್ನು ಕೆಎ.19.ಡಿ.3896ನೇ ಆಟೋರಿಕ್ಷಾದಲ್ಲಿ ಸಾಗಾಟ ಮಾಡಲು ಸಿದ್ದತೆ ನಡೆಸಿರುವುದು ಕಂಡು ಬಂದಿತ್ತು. ಈ ಕೃತ್ಯದಲ್ಲಿ ಆರೋಪಿಯ ಜೊತೆಗೆ ಇನ್ನೋರ್ವ ಗೋಳ್ತಮಜಲು ನಿವಾಸಿ ರಫೀಕ್ ಎಂಬಾತನೂ ಭಾಗಿಯಾಗಿದ್ದು, ಸ್ಥಳದಲ್ಲಿದ್ದ ಅಕ್ಕಿಯ ಗೋಣಿ ಚೀಲಗಳನ್ನು, ಸಾಗಾಟ ಮಾಡಲು ಬಳಸಿದ ಆಟೋರಿಕ್ಷಾ, ತೂಕದ ಯಂತ್ರ, ಖಾಲಿ ಗೋಣಿ ಚೀಲಗಳು ಸೇರಿದಂತೆ ಇತರೆ ಸೊತ್ತುಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಸ್ವಾಧೀನಪಡಿಸಿಕೊಂಡು, ಆರೋಪಿಗಳ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ: 96/2025, ಕಲಂ 3, 7 ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕಲಂ 18 ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ದತಿ ( ನಿಯಂತ್ರಣ ಆದೇಶ) 2016 ರಂತೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು