2:07 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಗಣೇಶೋತ್ಸವಕ್ಕೆ ವಿನಾಯಕ ರೆಡಿ: 5 ಸಾವಿರಕ್ಕೂ ಹೆಚ್ಚು ಗಣಪತಿ ವಿಗ್ರಹ ರೂಪಿಸಿದ ಎಸ್.ಎನ್.ಹೊಳ್ಳ!

25/08/2025, 17:34

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಳೆದ 40 ವರ್ಷಗಳಿಂದ ಐದು ಸಾವಿರಕ್ಕೂ ಹೆಚ್ಚಿನ ಗಣೇಶ ಮೂರ್ತಿಯನ್ನು ನಿರ್ಮಾಣ ಮಾಡಿ ಸಾರ್ವಜನಿಕ ಗಣೇಶೋತ್ಸವಕ್ಕೆ ಒದಗಿಸಿದವರು ಬಂಟ್ವಾಳದ ಶಂಕರ ನಾರಾಯಣ ಹೊಳ್ಳರು ಈ ಬಾರಿಯೂ 100ಕ್ಕೂ ಹೆಚ್ಚಿನ ಗಣೇಶನ ವಿಗ್ರಹವನ್ನು ನಿರ್ಮಾಣ ಮಾಡಿದ್ದು, ಸಾರ್ವಜನಿಕ ಗಣೇಶೋತ್ಸವದಲ್ಲಿ ಪ್ರತಿಷ್ಠಾಪನೆಯಾಗಿ ಪೂಜೆಗೊಳ್ಳಲಿದೆ.


ಹೊಳ್ಳರು ತನ್ನ ತಂದೆ ಎಸ್.ವಿ.ಎಸ್ .ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದ ಬಿ.ಕೃಷ್ಣ ಹೊಳ್ಳರಿಂದ ವಿಗ್ರಹದ ನಿರ್ಮಾಣದ ಕೈಚಳಕವನ್ನು ಕರಗತ ಮಾಡಿಕೊಂಡಿದ್ದಾರೆ. ಆವೆ ಮಣ್ಣಿನಿಂದ ಮಾಡಿದ ವಿಗ್ರಹವು ಯಾವುದೇ ಪೈಂಟ್ ಬಳಸದೆ ವಾಟರ್ ಕಲರ್‌ನಿಂದ ನಿರ್ಮಾಣ ಮಾಡಿರುತ್ತಾರೆ. ಕಳೆದ 3 ತಿಂಗಳಿನಿಂದ ಮೂರ್ತಿ ನಿರ್ಮಾಣದ ಕೆಲಸವನ್ನು ಗಣೇಶೋತ್ಸವ ಸಮಿತಿಗಳ ಅಪೇಕ್ಷೆಯಂತೆ ವಿವಿಧ ಅಕಾರದ ಪೀಠಗಳಲ್ಲಿ ನಿರ್ಮಿಸಿದ್ದಾರೆ. 1ಅಡಿಯಿಂದ 5 ಅಡಿಯವರೆಗಿನ ಮೂರ್ತಿಗಳು ಪಾಣೆಮಂಗಳೂರು ವೀರವಿಠಲ ದೇವಸ್ಥಾನದ ವಠಾರದಲ್ಲಿ ಸಿದ್ಧವಾಗಿದೆ. ಮೂರ್ತಿಯ ಮೇಲೆ ಬೆಳ್ಳಿ ಕಿರೀಟವನ್ನು ಇರಿಸಿ ಗಣೇಶೋತ್ಸವ ಸಂದರ್ಭದಲ್ಲಿ ವಿವಿಧ ಹೂವಿನ ಅಲಂಕಾರಗಳನ್ನು ಮಾಡಲಾಗುತ್ತದೆ. ಮನೆಗಳಲ್ಲಿಯೂ ಪೀತಾಂಬರ ಬಣ್ಣದ ವಿಗ್ರಹವನಿಟ್ಟು ಆರಾಧನೆ ಮಾಡುತ್ತಿದ್ದಾರೆ.
ಬಂಟ್ವಾಳ ತಾಲೂಕಿನಲ್ಲಿ ಸಜಿಪ ಯುವಕ ಮಂಡಲದ 52ನೇ ವರ್ಷದ ಗಣೇಶೋತ್ಸವ , ಕಲ್ಲಡ್ಕದಲ್ಲಿ 50ನೇ ಗಣೇಶೋತ್ಸವ , ಬಿ.ಸಿ.ರೋಡಿನಲ್ಲಿ 46ನೇ ಗಣೇಶೋತ್ಸವ, ಫರಂಗಿಪೇಟೆಯಲ್ಲಿ 43ನೇ ಗಣೇಶೋತ್ಸವ, ಪಾಣೆಮಂಗಳೂರು ನರಿಕೊಂಬು ನವಜೀವನ ವ್ಯಾಯಾಮ ಶಾಲೆಯಲ್ಲಿ 43ನೇ ಗಣೇಶೋತ್ಸವ ಸೇರಿದಂತೆ ವಿವಿಧೆಡೆ ಸಾರ್ವಜನಿಕ ಗಣೇಶೋತ್ಸವಕ್ಕೆ ಸಿದ್ದತೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು