11:24 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ: ಹಸೆಮಣೆ ಏರಲಿರುವ ಅನುಶ್ರೀ- ರೋಷನ್ ಜೋಡಿ

26/08/2025, 23:06

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಆ್ಯಂಕರ್ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಅನುಶ್ರೀ ಅವರು ಆ. 28ರಂದು ಹಸೆಮಣೆ ಏರಲಿದ್ದಾರೆ.
ಅವರು ಬೆಂಗಳೂರು ಹೊರ ವಲಯದಲ್ಲಿರುವ ಕಗ್ಗಲಿಪುರದ ಬೈ ಸ್ಪಾನ್​ಲೈನ್ಸ್ ಸ್ಟುಡಿಯೋಸ್​ನಲ್ಲಿ ಕೊಡಗು ಜಿಲ್ಲೆ ಸುಂಟಿಕೊಪ್ಪ ಮೂಲದ ರೋಷನ್ ಅವರೊಂದಿಗೆ ಸಪ್ತಪದಿ ತುಳಿಯಲಿದ್ದಾರೆ.
ಇತ್ತೀಚಿಗೆ ಅನುಶ್ರೀ ಅವರ ಲಗ್ನ ಪತ್ರಿಕೆ ವೈರಲ್ ಆಗಿದ್ದು, ‘ನೀವೆಲ್ಲ ಕೇಳುತ್ತಿದ್ದ ಪ್ರಶ್ನೆಗೆ ಈಗ ಉತ್ತರ, ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ’ ಎಂದು ಲಗ್ನ ಪತ್ರಿಕೆಯಲ್ಲಿ ಅನುಶ್ರೀ ಛಾಪಿಸಿದ್ದಾರೆ.
ಅನುಶ್ರೀ ಹಾಗೂ ರೋಷನ್ ಅವರದ್ದು ಪ್ರೇಮ ವಿವಾಹ ಎಂದು ಹೇಳಲಾಗಿದೆ. ಈ ಜೋಡಿ ಮೊದಲು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮನೆಯಲ್ಲಿ ಭೇಟಿಯಾಗಿ ತದನಂತರ ಪರಿಚಯ ಬೆಳೆದು, ಪ್ರೇಮಾಂಕುರಗೊಂಡಿತ್ತು. ಈಗ ಪರಸ್ಪರ ಮನೆಯವರ ಒಪ್ಪಿಗೆಯೊಂದಿಗೆ ಬಾಳ ಸಂಗಾತಿಗಳಾಗುತ್ತಿದ್ದಾರೆ.
ಅನುಶ್ರೀ ಅವರ ಭಾವಿ ಪತಿ ರೋಷನ್ ಮೂಲತಃ ಕೊಡಗು ಜಿಲ್ಲೆ ಸುಂಟಿಕೊಪ್ಪ ಮೂಲದವರು. ಈ ಹಿಂದೆ ಸುಂಟಿಕೊಪ್ಪದಲ್ಲಿ ಎಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದ ರಾಮಮೂರ್ತಿ ಮತ್ತು ಸಿಸಿಲಿಯ ದಂಪತಿಯ ಪುತ್ರ. ಇವರು ಜನಿಸಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಣ ಪಡೆದಿದ್ದು ಸುಂಟಿಕೊಪ್ಪದಲ್ಲಿ. ದಶಕದ ಹಿಂದೆ ಇವರ ತಂದೆ ತಾಯಿ ಸುಂಟಿಕೊಪ್ಪ ತೊರೆದು ಪ್ರಸ್ತುತ ಕುಶಾಲನಗರದಲ್ಲಿ ನೆಲೆಸಿದ್ದಾರೆ. ಉನ್ನತ ಶಿಕ್ಷಣ ಪಡೆದು ರೋಷನ್ ಬೆಂಗಳೂರಿನಲ್ಲಿ ತಮ್ಮದೇ ಆದ ಉದ್ಯಮವನ್ನು ಆರಂಭಿಸಿದ್ದರು.
ಆ. 28ರಂದು ಅನುಶ್ರೀ ಮತ್ತು ರೋಷನ್ ಜೋಡಿ ತಮ್ಮ ಆಪ್ತರು, ಕುಟುಂಬದವರು ಹಾಗೂ ಗೆಳೆಯರ ಸಮ್ಮುಖದಲ್ಲಿ ಹಸೆಮಣೆ ಏರಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು