6:39 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ: ಹಸೆಮಣೆ ಏರಲಿರುವ ಅನುಶ್ರೀ- ರೋಷನ್ ಜೋಡಿ

26/08/2025, 23:06

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಆ್ಯಂಕರ್ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಅನುಶ್ರೀ ಅವರು ಆ. 28ರಂದು ಹಸೆಮಣೆ ಏರಲಿದ್ದಾರೆ.
ಅವರು ಬೆಂಗಳೂರು ಹೊರ ವಲಯದಲ್ಲಿರುವ ಕಗ್ಗಲಿಪುರದ ಬೈ ಸ್ಪಾನ್​ಲೈನ್ಸ್ ಸ್ಟುಡಿಯೋಸ್​ನಲ್ಲಿ ಕೊಡಗು ಜಿಲ್ಲೆ ಸುಂಟಿಕೊಪ್ಪ ಮೂಲದ ರೋಷನ್ ಅವರೊಂದಿಗೆ ಸಪ್ತಪದಿ ತುಳಿಯಲಿದ್ದಾರೆ.
ಇತ್ತೀಚಿಗೆ ಅನುಶ್ರೀ ಅವರ ಲಗ್ನ ಪತ್ರಿಕೆ ವೈರಲ್ ಆಗಿದ್ದು, ‘ನೀವೆಲ್ಲ ಕೇಳುತ್ತಿದ್ದ ಪ್ರಶ್ನೆಗೆ ಈಗ ಉತ್ತರ, ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ’ ಎಂದು ಲಗ್ನ ಪತ್ರಿಕೆಯಲ್ಲಿ ಅನುಶ್ರೀ ಛಾಪಿಸಿದ್ದಾರೆ.
ಅನುಶ್ರೀ ಹಾಗೂ ರೋಷನ್ ಅವರದ್ದು ಪ್ರೇಮ ವಿವಾಹ ಎಂದು ಹೇಳಲಾಗಿದೆ. ಈ ಜೋಡಿ ಮೊದಲು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮನೆಯಲ್ಲಿ ಭೇಟಿಯಾಗಿ ತದನಂತರ ಪರಿಚಯ ಬೆಳೆದು, ಪ್ರೇಮಾಂಕುರಗೊಂಡಿತ್ತು. ಈಗ ಪರಸ್ಪರ ಮನೆಯವರ ಒಪ್ಪಿಗೆಯೊಂದಿಗೆ ಬಾಳ ಸಂಗಾತಿಗಳಾಗುತ್ತಿದ್ದಾರೆ.
ಅನುಶ್ರೀ ಅವರ ಭಾವಿ ಪತಿ ರೋಷನ್ ಮೂಲತಃ ಕೊಡಗು ಜಿಲ್ಲೆ ಸುಂಟಿಕೊಪ್ಪ ಮೂಲದವರು. ಈ ಹಿಂದೆ ಸುಂಟಿಕೊಪ್ಪದಲ್ಲಿ ಎಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದ ರಾಮಮೂರ್ತಿ ಮತ್ತು ಸಿಸಿಲಿಯ ದಂಪತಿಯ ಪುತ್ರ. ಇವರು ಜನಿಸಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಣ ಪಡೆದಿದ್ದು ಸುಂಟಿಕೊಪ್ಪದಲ್ಲಿ. ದಶಕದ ಹಿಂದೆ ಇವರ ತಂದೆ ತಾಯಿ ಸುಂಟಿಕೊಪ್ಪ ತೊರೆದು ಪ್ರಸ್ತುತ ಕುಶಾಲನಗರದಲ್ಲಿ ನೆಲೆಸಿದ್ದಾರೆ. ಉನ್ನತ ಶಿಕ್ಷಣ ಪಡೆದು ರೋಷನ್ ಬೆಂಗಳೂರಿನಲ್ಲಿ ತಮ್ಮದೇ ಆದ ಉದ್ಯಮವನ್ನು ಆರಂಭಿಸಿದ್ದರು.
ಆ. 28ರಂದು ಅನುಶ್ರೀ ಮತ್ತು ರೋಷನ್ ಜೋಡಿ ತಮ್ಮ ಆಪ್ತರು, ಕುಟುಂಬದವರು ಹಾಗೂ ಗೆಳೆಯರ ಸಮ್ಮುಖದಲ್ಲಿ ಹಸೆಮಣೆ ಏರಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು