1:40 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Mysore | ಗಣೇಶ ಚತುರ್ಥಿ: ದಸರಾ ಗಜಪಡೆಗೆ ಅರಮನೆ ಮುಂಭಾಗದಲ್ಲಿ ವಿಶೇಷ ಪೂಜೆ

27/08/2025, 23:31

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ನೈಜ ಸ್ವರೂಪದ ವಿನಾಯಕನಾದ ಗಜಪಡೆಗೆ ಇಂದು ಅರಮನೆ ಮುಂಭಾಗದಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಗಣೇಶ ಚತುರ್ಥಿಯನ್ನು ಆಚರಿಸಲಾಯಿತು.
ಪ್ರತಿವರ್ಷ ನಾಡಹಬ್ಬ ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಭಾಗವಹಿಸಲು ಆಗಮಿಸುವ ದಸರಾ ಗಜಪಡೆ ಸಾಮಾನ್ಯವಾಗಿ ಗಣೇಶ ಚತುರ್ಥಿಯನ್ನು ಅರಮನೆ ಆವರಣದಲ್ಲೇ ಆಚರಿಸುವುದು ಸಂಪ್ರದಾಯವಾಗಿದೆ. ಅಭಿಮನ್ಯು ನೇತೃತ್ವದ ದಸರಾ ಗಜಪಡೆಯ ಧನಂಜಯ, ಕಾವೇರಿ, ಲಕ್ಷ್ಮೀ, ಭೀಮ, ಏಕಲವ್ಯ, ಮಹೇಂದ್ರ, ಕಂಜನ್, ಪ್ರಶಾಂತ, ಹೇಮಾವತಿ, ಸುಗ್ರೀವ, ರೂಪ, ಗೋಪಿ ಹಾಗೂ ಶ್ರೀಕಂಠ ಸೇರಿದಂತೆ 14 ಆನೆಗಳನ್ನು ಅರಮನೆ ಮುಂಭಾಗದ ಮಾವುತರ ಶೆಡ್​ನ ಹಿಂಭಾಗದಲ್ಲಿರುವ ಸ್ಥಳದಲ್ಲಿ ಸಾಲಾಗಿ ನಿಲ್ಲಿಸಿ ಅವುಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು.
ಅರ್ಚಕ ಪ್ರಹ್ಲಾದ್ ರಾವ್ ಅವರು 14 ಆನೆಗಳ ಪಾದ ತೊಳೆದು ಅವುಗಳಿಗೆ ಅರಿಶಿಣ, ಕುಂಕುಮ ಇಟ್ಟು ಪೂಜೆ ಮಾಡಿದರು. ನಂತರ ಗಣೇಶನಿಗೆ ಇಷ್ಟವಾದ ಕಡುಬು, ಸಿಹಿತಿಂಡಿಗಳು ಮತ್ತು ಕಬ್ಬನ್ನು ಗಜಪಡೆಗೆ ನೀಡಲಾಯಿತು. ಅರಣ್ಯ ಇಲಾಖೆ, ಅರಮನೆ ಆಡಳಿತ ಮಂಡಳಿ ಸಂಯುಕ್ತವಾಗಿ ಗಜಪಡೆಗೆ ಪೂಜೆ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಸಹ ಭಾಗವಹಿಸಿದ್ದರು. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ದಸರಾ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಅರಮನೆ ಆಡಳಿತ ಮಂಡಳಿ ಹಾಗೂ ಜಿಲ್ಲಾಧಿಕಾರಿ ಗಜಪಡೆಗೆ ತಾಂಬೂಲ ನೀಡಿದರು. ನೈಜ ಸ್ವರೂಪದ ವಿನಾಯಕ ಆನೆಗಳಿಗೆ ಪೂಜೆ ಸಲ್ಲಿಸಲಾಯಿತು ಎಂದು ಅರ್ಚಕ ಪ್ರಹ್ಲಾದ್ ರಾವ್ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು