3:42 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

Mysore | ಗಣೇಶ ಚತುರ್ಥಿ: ದಸರಾ ಗಜಪಡೆಗೆ ಅರಮನೆ ಮುಂಭಾಗದಲ್ಲಿ ವಿಶೇಷ ಪೂಜೆ

27/08/2025, 23:31

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ನೈಜ ಸ್ವರೂಪದ ವಿನಾಯಕನಾದ ಗಜಪಡೆಗೆ ಇಂದು ಅರಮನೆ ಮುಂಭಾಗದಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಗಣೇಶ ಚತುರ್ಥಿಯನ್ನು ಆಚರಿಸಲಾಯಿತು.
ಪ್ರತಿವರ್ಷ ನಾಡಹಬ್ಬ ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಭಾಗವಹಿಸಲು ಆಗಮಿಸುವ ದಸರಾ ಗಜಪಡೆ ಸಾಮಾನ್ಯವಾಗಿ ಗಣೇಶ ಚತುರ್ಥಿಯನ್ನು ಅರಮನೆ ಆವರಣದಲ್ಲೇ ಆಚರಿಸುವುದು ಸಂಪ್ರದಾಯವಾಗಿದೆ. ಅಭಿಮನ್ಯು ನೇತೃತ್ವದ ದಸರಾ ಗಜಪಡೆಯ ಧನಂಜಯ, ಕಾವೇರಿ, ಲಕ್ಷ್ಮೀ, ಭೀಮ, ಏಕಲವ್ಯ, ಮಹೇಂದ್ರ, ಕಂಜನ್, ಪ್ರಶಾಂತ, ಹೇಮಾವತಿ, ಸುಗ್ರೀವ, ರೂಪ, ಗೋಪಿ ಹಾಗೂ ಶ್ರೀಕಂಠ ಸೇರಿದಂತೆ 14 ಆನೆಗಳನ್ನು ಅರಮನೆ ಮುಂಭಾಗದ ಮಾವುತರ ಶೆಡ್​ನ ಹಿಂಭಾಗದಲ್ಲಿರುವ ಸ್ಥಳದಲ್ಲಿ ಸಾಲಾಗಿ ನಿಲ್ಲಿಸಿ ಅವುಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು.
ಅರ್ಚಕ ಪ್ರಹ್ಲಾದ್ ರಾವ್ ಅವರು 14 ಆನೆಗಳ ಪಾದ ತೊಳೆದು ಅವುಗಳಿಗೆ ಅರಿಶಿಣ, ಕುಂಕುಮ ಇಟ್ಟು ಪೂಜೆ ಮಾಡಿದರು. ನಂತರ ಗಣೇಶನಿಗೆ ಇಷ್ಟವಾದ ಕಡುಬು, ಸಿಹಿತಿಂಡಿಗಳು ಮತ್ತು ಕಬ್ಬನ್ನು ಗಜಪಡೆಗೆ ನೀಡಲಾಯಿತು. ಅರಣ್ಯ ಇಲಾಖೆ, ಅರಮನೆ ಆಡಳಿತ ಮಂಡಳಿ ಸಂಯುಕ್ತವಾಗಿ ಗಜಪಡೆಗೆ ಪೂಜೆ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಸಹ ಭಾಗವಹಿಸಿದ್ದರು. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ದಸರಾ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಅರಮನೆ ಆಡಳಿತ ಮಂಡಳಿ ಹಾಗೂ ಜಿಲ್ಲಾಧಿಕಾರಿ ಗಜಪಡೆಗೆ ತಾಂಬೂಲ ನೀಡಿದರು. ನೈಜ ಸ್ವರೂಪದ ವಿನಾಯಕ ಆನೆಗಳಿಗೆ ಪೂಜೆ ಸಲ್ಲಿಸಲಾಯಿತು ಎಂದು ಅರ್ಚಕ ಪ್ರಹ್ಲಾದ್ ರಾವ್ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು