10:23 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ ಬದಲಾವಣೆ, ಪಾಸ್ ರದ್ದು

28/08/2025, 11:37

ಗಿರಿಧರ್ ಕೊಂಪುಳಿರ ಹಾಸನ

info.reporterkarnataka@gmail.com

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ಉತ್ಸವ ಈ ವರ್ಷ ಅಕ್ಟೋಬರ್ 9 ರಿಂದ 23ರವರೆಗೆ ನಡೆಯಲಿದೆ. ಹೀಗಾಗಿ ಹಾಸನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ದರ್ಶನೋತ್ಸವ ಸಿದ್ಧತೆ ಸಭೆ ಮಾಡಲಾಗಿದೆ. ಗಣ್ಯರು ಮತ್ತು ಭಕ್ತರ ದರ್ಶನದ ವ್ಯವಸ್ಥೆ ಕುರಿತು ಚರ್ಚೆ ಮಾಡಲಾಗಿದೆ.
ಅಧಿದೇವತೆ, ಬೇಡಿದ ವರವ ನೀಡುವ ಮಹಾತಾಯಿ, ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನಾಂಬೆ ಉತ್ಸವಕ್ಕೆ ಇದೀಗ ದಿನಗಣನೆ ಶುರುವಾಗಿದೆ. ಈ ವರ್ಷ ಅಕ್ಟೋಬರ್ 9 ರಿಂದ 23 ರವರೆಗೆ ಹಾಸನಾಂಬೆ ಉತ್ಸವ ಜರುಗಲಿದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ ಉಳಿದ 13 ದಿನ ಭಕ್ತರಿಗೆ ಹಾಸನಾಂಬೆ ದರುಶನ ಕರುಣಿಸಲಿದ್ದಾಳೆ. ಹೀಗಾಗಿ ಹಾಸನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ದರ್ಶನೋತ್ಸವ ಸಿದ್ಧತೆ ಸಭೆ ನಡೆಯಿತು. ಶಾಸಕರಾದ ಸ್ವರೂಪ್, ಸಿಮೆಂಟ್ ಮಂಜು, ಶಿವಲಿಂಗೇಗೌಡ ಭಾಗಿಯಾಗಿದ್ದರು.
*ಭಕ್ತರಿಗೆ ಸಮಯ ನಿಗದಿ ಮಾಡುವಂತೆ ಸಚಿವ ಕೃಷ್ಣಬೈರೇಗೌಡ ಸಲಹೆ:*
ಸಭೆಯಲ್ಲಿ ಮಾತನಾಡಿದ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ, ರಾಜ್ಯದ ಮೂಲೆ ಮೂಲೆಯಿಂದ ಜನರು ಹಾಸನಾಂಬೆ ದರ್ಶನಕ್ಕೆ ಬರುತ್ತಾರೆ. ಆದರೆ ವಿವಿಐಪಿ, ವಿಐಪಿ ಭಕ್ತರ ಕಾರಣದಿಂದ ಜನರಿಗೆ ದರ್ಶನಕ್ಕೆ ಸಮಸ್ಯೆ ಆಗುತ್ತದೆ. ಅವರನ್ನು ಗಂಟೆಗಟ್ಟಲೇ ನಿಲ್ಲಿಸಿ ಜನರಿಗೆ ತೊಂದರೆ ಕೊಡುವುದು ಸರಿಯಲ್ಲ. ಹಾಗಾಗಿ ಈ ಗಣ್ಯ ಸಂಸ್ಕೃತಿ ತಡೆಯಲು ಸಹಕರಿಸಿ ಎಂದು ಮನವಿ ಮಾಡಿದರು.
ನಾನು ವಿಐಪಿ ಹಾಗೂ ಶಿಷ್ಟಾಚಾರ ಭಕ್ತರಿಗೆ ಸಮಯ ನಿಗದಿ ಮಾಡಿ ಎಂದು ಹೇಳಿದ್ದೆ. ಗೋಲ್ಡ್ ಕಾರ್ಡ್​ಗೆ ಎರಡು ಗಂಟೆ, ಶಿಷ್ಟಾಚಾರಕ್ಕೆ ಎರಡು ಗಂಟೆ ಮಾತ್ರ ಸಮಯ ನಿಗದಿ ಮಾಡಿ ಎಂದು ಸಲಹೆ ನೀಡಲಾಗಿದೆ. ಇದೆಲ್ಲ ಮಾಡಿದರೆ ಜನರಿಗೆ ಅನುಕೂಲ ಆಗುತ್ತೆ ಎನ್ನುವುದಾದರೆ ಈ ಎಲ್ಲಾ ರೀತಿಯ ಬದಲಾವಣೆ ಮಾಡೋಣ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

*ಪಾಸ್ ವ್ಯವಸ್ಥೆ ಸಂಪೂರ್ಣ ರದ್ದು:*
ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿ ಅಧಿಕಾರಿ ಮಾರುತಿ ಮಾತನಾಡಿ, ಹಾಸನಾಂಬೆ ಉತ್ಸವ ವೇಳೆ ದರ್ಶನದ ಪಾಸ್ ವ್ಯವಸ್ಥೆ ಸಂಪೂರ್ಣ ರದ್ದು ಮಾಡಲಾಗುವುದು. ಪಾಸ್ ಬದಲು ಗೋಲ್ಡ್ ಕಾರ್ಡ್ ಬಳಕೆ ಇರಲಿದ್ದು, ಒಂದು ಗೋಲ್ಡ್ ಕಾರ್ಡ್​ಗೆ ಒಬ್ಬರಿಗೆ ಮಾತ್ರ ದರ್ಶನಕ್ಕೆ ಅವಕಾಶವಿದ್ದು, ಮುಂಜಾನೆ 5ರಿಂದ ದರ್ಶನಕ್ಕೆ ಅವಕಾಶವಿರಲಿದೆ ಎಂದು ತಿಳಿಸಿದರು.
ಉಚಿತ ಪಾಸ್ ಪಡೆದು ದರ್ಶನಕ್ಕೆ ಬರುತ್ತಿದ್ದ ಜನರಿಂದ ಗೊಂದಲವಾಗುತ್ತಿತ್ತು. ಆದ್ದರಿಂದ ಉಚಿತ ಪಾಸ್ ಬದಲು ಕೇವಲ ಗೋಲ್ಡ್ ಕಾರ್ಡ್ ಬಳಕೆ ಮಾಡಲಾಗುವುದು. ಸಿಎಂ, ಡಿಸಿಎಂ, ಸಿಜೆ ಹೊರತುಪಡಿಸಿ ಉಳಿದ ಎಲ್ಲಾ ಗಣ್ಯರಿಗೆ ವೈಯಕ್ತಿಕ ಶಿಷ್ಟಾಚಾರ ಬದಲು ಜಿಲ್ಲಾಡಳಿತ ನಿಯೋಜಿತ ವಾಹನ ಬಳಕೆ ಮಾಡಲಾಗುವುದು. ಕೊನೆಯ 5 ದಿನ ಎಲ್ಲಾ ರೀತಿಯ ಶಿಷ್ಟಾಚಾರ ರದ್ದು ಎಂದು ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿ ಅಧಿಕಾರಿ ಮಾರುತಿ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು