5:32 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ ಬದಲಾವಣೆ, ಪಾಸ್ ರದ್ದು

28/08/2025, 11:37

ಗಿರಿಧರ್ ಕೊಂಪುಳಿರ ಹಾಸನ

info.reporterkarnataka@gmail.com

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ಉತ್ಸವ ಈ ವರ್ಷ ಅಕ್ಟೋಬರ್ 9 ರಿಂದ 23ರವರೆಗೆ ನಡೆಯಲಿದೆ. ಹೀಗಾಗಿ ಹಾಸನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ದರ್ಶನೋತ್ಸವ ಸಿದ್ಧತೆ ಸಭೆ ಮಾಡಲಾಗಿದೆ. ಗಣ್ಯರು ಮತ್ತು ಭಕ್ತರ ದರ್ಶನದ ವ್ಯವಸ್ಥೆ ಕುರಿತು ಚರ್ಚೆ ಮಾಡಲಾಗಿದೆ.
ಅಧಿದೇವತೆ, ಬೇಡಿದ ವರವ ನೀಡುವ ಮಹಾತಾಯಿ, ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನಾಂಬೆ ಉತ್ಸವಕ್ಕೆ ಇದೀಗ ದಿನಗಣನೆ ಶುರುವಾಗಿದೆ. ಈ ವರ್ಷ ಅಕ್ಟೋಬರ್ 9 ರಿಂದ 23 ರವರೆಗೆ ಹಾಸನಾಂಬೆ ಉತ್ಸವ ಜರುಗಲಿದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ ಉಳಿದ 13 ದಿನ ಭಕ್ತರಿಗೆ ಹಾಸನಾಂಬೆ ದರುಶನ ಕರುಣಿಸಲಿದ್ದಾಳೆ. ಹೀಗಾಗಿ ಹಾಸನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ದರ್ಶನೋತ್ಸವ ಸಿದ್ಧತೆ ಸಭೆ ನಡೆಯಿತು. ಶಾಸಕರಾದ ಸ್ವರೂಪ್, ಸಿಮೆಂಟ್ ಮಂಜು, ಶಿವಲಿಂಗೇಗೌಡ ಭಾಗಿಯಾಗಿದ್ದರು.
*ಭಕ್ತರಿಗೆ ಸಮಯ ನಿಗದಿ ಮಾಡುವಂತೆ ಸಚಿವ ಕೃಷ್ಣಬೈರೇಗೌಡ ಸಲಹೆ:*
ಸಭೆಯಲ್ಲಿ ಮಾತನಾಡಿದ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ, ರಾಜ್ಯದ ಮೂಲೆ ಮೂಲೆಯಿಂದ ಜನರು ಹಾಸನಾಂಬೆ ದರ್ಶನಕ್ಕೆ ಬರುತ್ತಾರೆ. ಆದರೆ ವಿವಿಐಪಿ, ವಿಐಪಿ ಭಕ್ತರ ಕಾರಣದಿಂದ ಜನರಿಗೆ ದರ್ಶನಕ್ಕೆ ಸಮಸ್ಯೆ ಆಗುತ್ತದೆ. ಅವರನ್ನು ಗಂಟೆಗಟ್ಟಲೇ ನಿಲ್ಲಿಸಿ ಜನರಿಗೆ ತೊಂದರೆ ಕೊಡುವುದು ಸರಿಯಲ್ಲ. ಹಾಗಾಗಿ ಈ ಗಣ್ಯ ಸಂಸ್ಕೃತಿ ತಡೆಯಲು ಸಹಕರಿಸಿ ಎಂದು ಮನವಿ ಮಾಡಿದರು.
ನಾನು ವಿಐಪಿ ಹಾಗೂ ಶಿಷ್ಟಾಚಾರ ಭಕ್ತರಿಗೆ ಸಮಯ ನಿಗದಿ ಮಾಡಿ ಎಂದು ಹೇಳಿದ್ದೆ. ಗೋಲ್ಡ್ ಕಾರ್ಡ್​ಗೆ ಎರಡು ಗಂಟೆ, ಶಿಷ್ಟಾಚಾರಕ್ಕೆ ಎರಡು ಗಂಟೆ ಮಾತ್ರ ಸಮಯ ನಿಗದಿ ಮಾಡಿ ಎಂದು ಸಲಹೆ ನೀಡಲಾಗಿದೆ. ಇದೆಲ್ಲ ಮಾಡಿದರೆ ಜನರಿಗೆ ಅನುಕೂಲ ಆಗುತ್ತೆ ಎನ್ನುವುದಾದರೆ ಈ ಎಲ್ಲಾ ರೀತಿಯ ಬದಲಾವಣೆ ಮಾಡೋಣ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

*ಪಾಸ್ ವ್ಯವಸ್ಥೆ ಸಂಪೂರ್ಣ ರದ್ದು:*
ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿ ಅಧಿಕಾರಿ ಮಾರುತಿ ಮಾತನಾಡಿ, ಹಾಸನಾಂಬೆ ಉತ್ಸವ ವೇಳೆ ದರ್ಶನದ ಪಾಸ್ ವ್ಯವಸ್ಥೆ ಸಂಪೂರ್ಣ ರದ್ದು ಮಾಡಲಾಗುವುದು. ಪಾಸ್ ಬದಲು ಗೋಲ್ಡ್ ಕಾರ್ಡ್ ಬಳಕೆ ಇರಲಿದ್ದು, ಒಂದು ಗೋಲ್ಡ್ ಕಾರ್ಡ್​ಗೆ ಒಬ್ಬರಿಗೆ ಮಾತ್ರ ದರ್ಶನಕ್ಕೆ ಅವಕಾಶವಿದ್ದು, ಮುಂಜಾನೆ 5ರಿಂದ ದರ್ಶನಕ್ಕೆ ಅವಕಾಶವಿರಲಿದೆ ಎಂದು ತಿಳಿಸಿದರು.
ಉಚಿತ ಪಾಸ್ ಪಡೆದು ದರ್ಶನಕ್ಕೆ ಬರುತ್ತಿದ್ದ ಜನರಿಂದ ಗೊಂದಲವಾಗುತ್ತಿತ್ತು. ಆದ್ದರಿಂದ ಉಚಿತ ಪಾಸ್ ಬದಲು ಕೇವಲ ಗೋಲ್ಡ್ ಕಾರ್ಡ್ ಬಳಕೆ ಮಾಡಲಾಗುವುದು. ಸಿಎಂ, ಡಿಸಿಎಂ, ಸಿಜೆ ಹೊರತುಪಡಿಸಿ ಉಳಿದ ಎಲ್ಲಾ ಗಣ್ಯರಿಗೆ ವೈಯಕ್ತಿಕ ಶಿಷ್ಟಾಚಾರ ಬದಲು ಜಿಲ್ಲಾಡಳಿತ ನಿಯೋಜಿತ ವಾಹನ ಬಳಕೆ ಮಾಡಲಾಗುವುದು. ಕೊನೆಯ 5 ದಿನ ಎಲ್ಲಾ ರೀತಿಯ ಶಿಷ್ಟಾಚಾರ ರದ್ದು ಎಂದು ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿ ಅಧಿಕಾರಿ ಮಾರುತಿ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು