10:27 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಆರಂಭ

28/08/2025, 12:49

ಮಂಗಳೂರು(reporterkarnataka.com): ನಗರದ ಬೆಂದೂರ್‌ವೆಲ್ ನಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾ ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ.
ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿ ಚರ್ಚ್ ರೋಡ್ ಹತ್ತಿರ ನೊರೊನ ಕಾಂಪ್ಲೆಕ್ಸ್ ನಲ್ಲಿ ತೆರೆಯಲು ಸಜ್ಜಾಗಿದೆ. 30 ವರ್ಷಗಳ ವಿಶ್ವಾಸಾರ್ಹ ಸೇವೆ ಮಾಡುತ್ತಾ ಬಂದಿರುವ ಸೊಸೈಟಿಯು ಸತತ ಲಾಭ ಗಳಿಕೆಯೊಂದಿಗೆ, ಸದಸ್ಯರಿಗೆ ಸತತ 20% ಡಿವಿಡೆಂಡ್ ನೀಡುತ್ತಾ ಬರುತ್ತಿದೆ. ಸರ್ಕಾರದ ಅಡಿಟ್ ವರ್ಗೀಕರಣದಲ್ಲಿ ಸತತ ‘ಎ’ವರ್ಗ ಪಡೆಯುವುದರೊಂದಿಗೆ ಉತ್ತಮ ಅಭಿವೃದ್ಧಿಗೆ ಎಸ್ ಡಿ ಸಿ ಸಿ ಬ್ಯಾಂಕ್ ಸಾಧನ ಪ್ರಶಸ್ತಿಯನ್ನು ಸತತ ಪಡೆಯುತ್ತಾ ಬರುತ್ತಿದೆ.
ಎಲ್ಲಾ ಶಾಖೆಗಳು ಕಂಪ್ಯೂಟರಿಕೃತ ಲೆಕ್ಕಪತ್ರವ್ಯವಸ್ಥೆ ಎಲ್ಲಾ ಭದ್ರತಾ ವ್ಯವಸೆಗಳೊಂದಿಗೆ ಗ್ರಾಹಕರಿಗೆ ಉತ್ತಮ ಬ್ಯಾಂಕಿಂಗ್ ಸೇವೆ ನೀಡುತ್ತಾ ಬರುತ್ತಿದೆ. ಬೆಳ್ತಂಗಡಿ ಶಾಖೆಯು ಆರಂಭದ ಕೊಡುಗೆಯಾಗಿ ಸಾಮಾನ್ಯ ಠೇವಣಿ 1 ವರ್ಷಕ್ಕೆ 8.50%, 2 ವರ್ಷಕ್ಕೆ 9%, 3 ವರ್ಷಕ್ಕೆ 9.50% ಹಾಗೂ ಹಿರಿಯ ನಾಗರಿಕರಿಗೆ 1 ವರ್ಷಕ್ಕೆ 9%, 2 ವರ್ಷಕ್ಕೆ 9.50%, 3 ವರ್ಷಕ್ಕೆ 10% ನೀಡುತ್ತಿದ್ದು ಗ್ರಾಹಕ ಬಂಧುಗಳು ಕೆಲವೇ ದಿನಗಳ ಅವಧಿ ನೀಡುವ ಈ ಕೊಡುಗೆಯ ಸದುಪಯೋಗ ಪಡೆದುಕೊಳ್ಳಲು ಸೊಸೈಟಿಯ ಪ್ರಕಟಣೆಯಲ್ಲಿ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು