1:39 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಎರಡು ಕಾರುಗಳ ನಡುವೆ ಭೀಕರ ಅಪಘಾತ; ಓರ್ವ ಸಾವು: ಇನ್ನೊರ್ವ ಗಂಭೀರ, ಹಲವರಿಗೆ ಗಾಯ

29/08/2025, 14:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮೂಡಿಗೆರೆ -ಬಣಕಲ್ ನಡುವೆ ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಗುರುವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದ್ದು, ನಾಲ್ಕು ಮಂದಿ ತೀವ್ರ ಗಾಯಗೊಂಡಿದ್ದಾರೆ.
ಮೃತ ಯುವಕನನ್ನು ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿ ಹುಯಿಲುಮನೆ ಗ್ರಾಮದ ರಮೇಶ್ ಸುಮತಿ ದಂಪತಿ ಪುತ್ರ ಅಕ್ಷಯ್ (22) ಎಂದು ಗುರುತಿಸಲಾಗಿದೆ. ಅದೇ ಗ್ರಾಮದ ವಿಕಾಸ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಣಕಲ್ ಮೂಡಿಗೆರೆ ನಡುವಿನ ಹೊರಟ್ಟಿ ಗ್ರಾಮದ ಚಿಂತನ್ ಹಿಟ್ಟಿನ ಗಿರಣಿ ಬಳಿ ಈ ದುರ್ಘಟನೆ ನಡೆದಿದೆ. ಮೂಡಿಗೆರೆ ಕಡೆಗೆ ಬರುತ್ತಿದ್ದ ಇಕೋ ಸ್ಪೋರ್ಟ್ಸ್ ಕಾರು ಮತ್ತು ಬೆಂಗಳೂರು ಕಡೆಯಿಂದ ಹೊರನಾಡು ಕಡೆಗೆ ತೆರಳುತ್ತಿದ್ದ ಕ್ರೆಟಾ ಕಾರುಗಳ ನಡುವೆ ಅಪಘಾತ ಸಂಭವಿಸಿದೆ.
ಮೃತ ಅಕ್ಷಯ್ ಮತ್ತು ಗಂಭೀರವಾಗಿ ಗಾಯಗೊಂಡ ವಿಕಾಸ್ ಇವರುಗಳು ಇಕೋ ಸ್ಪೋರ್ಟ್ಸ್ ಕಾರಿನಲ್ಲಿ ಇದ್ದರು. ಬೆಂಗಳೂರು ಮೂಲದ ಕಾರಿನಲ್ಲಿದ್ದ ಮೂವರು ತೀವ್ರವಾಗಿ ಗಾಯಗೊಂಡಿದ್ದು ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಬೇರೆಡೆ ಕರೆದೊಯ್ಯಲಾಗಿದೆ. ಗಾಯಗೊಂಡವರನ್ನು ಗಂಗಯ್ಯ, ಹರ್ಷ, ವಿಜಯ ಎಂದು ಗುರುತಿಸಲಾಗಿದೆ.

*ಅಕ್ಷಯ್:* ಮೃತ ಅಕ್ಷಯ್ ತಂದೆ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಅಕ್ಷಯ್ ರಾಜಕೀಯವಾಗಿ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಅಗ್ರಿ ಕಂಪನಿಯೊಂದರಲ್ಲಿ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅಕ್ಷಯ್ ಒಂದು ವಾರದ ಹಿಂದಷ್ಟೇ ಇಕೋ ಸ್ಪೋರ್ಟ್ಸ್ ಕಾರನ್ನು ಖರೀದಿಸಿದ್ದರು ಎಂದು ತಿಳಿದುಬಂದಿದೆ.
ರಸ್ತೆಯಲ್ಲಿ ನೀರು ನಿಂತಿದ್ದ ಅವಘಡಕ್ಕೆ ಕಾರಣವಾಗಿದೆ.
ಅಪಘಾತ ನಡೆದ ಸ್ಥಳವು ನೇರವಾದ ರಸ್ತೆಯಾಗಿದೆ. ಆದರೂ ಇಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಇಲ್ಲಿ ಚರಂಡಿ ನೀರು ರಸ್ತೆಯಲ್ಲಿ ನಿಲ್ಲುತ್ತಿರುವುದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಅಂದಾಜಿಸಲಾಗಿದೆ. ವೇಗವಾಗಿದ್ದ ಕಾರಿಗೆ ಬ್ರೇಕ್ ಹಾಕಿದಾಗ ರಸ್ತೆಯಲ್ಲಿ ನೀರಿದ್ದ ಕಾರಣ ನಿಯಂತ್ರಣ ತಪ್ಪಿ ಮತ್ತೊಂದು ಬದಿಗೆ ಬಂದಿದ್ದು, ಎದುರಿನಿಂದ ಬರುತ್ತಿದ್ದ ಕಾರು ವೇಗವಾಗಿ ಡಿಕ್ಕಿ ಹೊಡೆದದ್ದರಿಂದ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಅವೈಜ್ಞಾನಿಕ ಕಾಮಗಾರಿಯೇ ಈ ಅಪಘಾತಕ್ಕೆ ಕಾರಣವಾಗಿದೆ ಸಾರ್ಜಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇವತ್ತಿನ ಬಡವನದಿಣ್ಣೆ ರಸ್ತೆ ಅಪಘಾತಕ್ಕೆ ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದ ರಸ್ತೆ ಬದಿಯಲ್ಲಿ ನೀರು ಹರಿದು ಹೋಗದೆ ರಸ್ತೆಯಲ್ಲಿ ನೀರು ನಿಲ್ಲುವ ಪರಿಣಾಮ .ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇದರ ಸಂಪೂರ್ಣ ಜವಾಬ್ದಾರಿ ಆಗಿರುತ್ತಾರೆ. ಸಂಬಂಧ ಪಟ್ಟ ಕಾಮಗಾರಿ ಮಾಡಿದ ಗುತ್ತಿಗೆದಾರರು ಮಾಡಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಮೇಲ್ಗಡೆ ಗದ್ದೆಯಿಂದ ಬರುವ ನೀರು ಮಳೆಯಿಂದ ತುಂಬಿರುತ್ತೆ, ನೀರು ಹರಿದು ಹೋಗುವುದಕ್ಕೆ ಸರಿಯಾದ ಚರಂಡಿ ಜೊತೆಗೆ ಮೋರಿಗಳ ಕೆಲಸ ಆಗಿಲ್ಲ ಅವೈಜ್ಞಾನಿಕ ಕಾಮಗಾರಿ  ಎದ್ದು ಕಾಣುತ್ತದೆ. ಸ್ಥಳೀಯ ಸಂಸದರು ಇದರ ಬಗ್ಗೆ ಹ್ಯಾಂಡಪೋಸ್ಟ್ ನಿಂದ ಕೊಟ್ಟಿಗೆಹಾರದ ತನಕ ರಸ್ತೆ ಗುಣಮಟ್ಟ ಹಾಗೂ ರಸ್ತೆ ಬದಿಯ ಚರಂಡಿ ವ್ಯವಸ್ಥೆಗಳ ಬಗ್ಗೆ ನಿಗಾ ವಹಿಸಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸ ಬೇಕೆಂದು ನೊಂದ ಪಾಲಕರ ಪರವಾಗಿ ಮೂಡಿಗೆರೆ ಹಂಡುಗುಳಿಯ ಜಗದೀಪ್. ಕೆ. ಎಂ. ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು