10:02 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

Kodagu | ಶ್ರೀ ಗಣೇಶ ಸೇವಾ ಸಮಿತಿಯಿಂದ ವೈಭವದ ಗಣೇಶೋತ್ಸವ: ಮೇಕೇರಿಯಲ್ಲಿ ಗಮನಸೆಳೆದ ಭಜನೆ ಕುಣಿತ

31/08/2025, 15:38

ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿ ಗ್ರಾಮದ ಶ್ರೀ ಗೌರೀಶಂಕರ ದೇವಾಲಯದಲ್ಲಿ ಶ್ರೀ ಗಣೇಶ ಸೇವಾ ಸಮಿತಿ ಆಶ್ರಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣೇಶನ ಶೋಭಾಯಾತ್ರೆಯಲ್ಲಿ ಪುತ್ತೂರಿನ ಭಜನಾ ತಂಡದಿಂದ ನೃತ್ಯ ಭಜನೆ ಗಮನ ಸೆಳೆಯಿತು.
ಆಗಸ್ಟ್ 27ರಂದು ಗಣೇಶನ ಉತ್ಸವ ಮೂರ್ತಿಯನ್ನು ಪ್ರತಿಷ್ಥಾಪಿಸುವ ಮೂಲಕ ಗಣೇಶೋತ್ಸವಕ್ಕೆ ಚಾಲನೆ ನೀಡಿ 29ರಂದು ಸಂಜೆ ಸುಭಾಷ್‌ನಗರದ ಹೊಳೆಯಲ್ಲಿ ಗಣೇಶನ ಉತ್ಸವ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು.
ಈ ನಡುವೆ ದೇವಾಲಯದ ಆವರಣದಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗ್ರಾಮದ ನಿವಾಸಿ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ ನಡೆಯಿತು.
ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ವಾಗ್ಮಿ ಶ್ರೀಶಾ ಅವರು ಗಣೇಶೋತ್ವವದ ಆಚರಣೆ, ಮಹತ್ವ, ನಡೆದು ಬಂದ ಹಾದಿಯ ಕುರಿತು ಧಾರ್ಮಿಕ ಪ್ರವಚನ ನೀಡಿದರು.
28ರಂದು ಸಂಜೆ ಖ್ಯಾತ ಗಾಯನ ತಂಡದಿಂದ ಸಂಗೀತ ಸತ್ಸಂಗ, ಧಾರ್ಮಿಕ ಪ್ರವಚನ ನಡೆಯಿತು. ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಶ್ರೀ ಗೌರಿ ಗಣೇಶನ ಉತ್ಸವ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಮೇಕೇರಿ ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಹೊರಟು ಸುಭಾಷ್ ನಗರದ ಹೊಳೆಯಲ್ಲಿ ವಿಸರ್ಜಿಸಲಾಯಿತು. ಶ್ರೀ ಗಣೇಶ ಸೇವಾ ಸಮಿತಿಯಿಂದ ಪ್ರತೀದಿ ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಂತರ್ಪಣೆ ನಡೆಯಿತು.
ಗಮನ ಸೆಳೆದ ಭಜನೆ ಕುಣಿತ ಈ ಬಾರಿ ಮೇಕೇರಿ ಗ್ರಾಮದಲ್ಲಿ ನೃತ್ಯ ಭಜನೆಯ ಸದ್ದು ಭಕ್ತಾದಿಗಳನ್ನು ಪುಳಕಿತಗೊಳಿಸಿತು. ಶ್ರೀ ಗಣೇಶ ಸೇವಾ ಸಮಿತಿಯ ಆಶ್ರಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣೇಶನ ಶೋಭಾಯಾತ್ರೆಯಲ್ಲಿ ಪುತ್ತೂರಿನ ಆನಡ್ಕದ ಶ್ರೀರಾಮ ಭಜನಾ ತಂಡದಿಂದ ನಡೆದ ನೃತ್ಯ ಭಜನೆಯು ಭಕ್ತಾದಿಗಳ ಮನಸೂರೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು