3:13 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Kodagu | ಶ್ರೀ ಗಣೇಶ ಸೇವಾ ಸಮಿತಿಯಿಂದ ವೈಭವದ ಗಣೇಶೋತ್ಸವ: ಮೇಕೇರಿಯಲ್ಲಿ ಗಮನಸೆಳೆದ ಭಜನೆ ಕುಣಿತ

31/08/2025, 15:38

ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿ ಗ್ರಾಮದ ಶ್ರೀ ಗೌರೀಶಂಕರ ದೇವಾಲಯದಲ್ಲಿ ಶ್ರೀ ಗಣೇಶ ಸೇವಾ ಸಮಿತಿ ಆಶ್ರಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣೇಶನ ಶೋಭಾಯಾತ್ರೆಯಲ್ಲಿ ಪುತ್ತೂರಿನ ಭಜನಾ ತಂಡದಿಂದ ನೃತ್ಯ ಭಜನೆ ಗಮನ ಸೆಳೆಯಿತು.
ಆಗಸ್ಟ್ 27ರಂದು ಗಣೇಶನ ಉತ್ಸವ ಮೂರ್ತಿಯನ್ನು ಪ್ರತಿಷ್ಥಾಪಿಸುವ ಮೂಲಕ ಗಣೇಶೋತ್ಸವಕ್ಕೆ ಚಾಲನೆ ನೀಡಿ 29ರಂದು ಸಂಜೆ ಸುಭಾಷ್‌ನಗರದ ಹೊಳೆಯಲ್ಲಿ ಗಣೇಶನ ಉತ್ಸವ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು.
ಈ ನಡುವೆ ದೇವಾಲಯದ ಆವರಣದಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗ್ರಾಮದ ನಿವಾಸಿ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ ನಡೆಯಿತು.
ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ವಾಗ್ಮಿ ಶ್ರೀಶಾ ಅವರು ಗಣೇಶೋತ್ವವದ ಆಚರಣೆ, ಮಹತ್ವ, ನಡೆದು ಬಂದ ಹಾದಿಯ ಕುರಿತು ಧಾರ್ಮಿಕ ಪ್ರವಚನ ನೀಡಿದರು.
28ರಂದು ಸಂಜೆ ಖ್ಯಾತ ಗಾಯನ ತಂಡದಿಂದ ಸಂಗೀತ ಸತ್ಸಂಗ, ಧಾರ್ಮಿಕ ಪ್ರವಚನ ನಡೆಯಿತು. ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಶ್ರೀ ಗೌರಿ ಗಣೇಶನ ಉತ್ಸವ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಮೇಕೇರಿ ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಹೊರಟು ಸುಭಾಷ್ ನಗರದ ಹೊಳೆಯಲ್ಲಿ ವಿಸರ್ಜಿಸಲಾಯಿತು. ಶ್ರೀ ಗಣೇಶ ಸೇವಾ ಸಮಿತಿಯಿಂದ ಪ್ರತೀದಿ ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಂತರ್ಪಣೆ ನಡೆಯಿತು.
ಗಮನ ಸೆಳೆದ ಭಜನೆ ಕುಣಿತ ಈ ಬಾರಿ ಮೇಕೇರಿ ಗ್ರಾಮದಲ್ಲಿ ನೃತ್ಯ ಭಜನೆಯ ಸದ್ದು ಭಕ್ತಾದಿಗಳನ್ನು ಪುಳಕಿತಗೊಳಿಸಿತು. ಶ್ರೀ ಗಣೇಶ ಸೇವಾ ಸಮಿತಿಯ ಆಶ್ರಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣೇಶನ ಶೋಭಾಯಾತ್ರೆಯಲ್ಲಿ ಪುತ್ತೂರಿನ ಆನಡ್ಕದ ಶ್ರೀರಾಮ ಭಜನಾ ತಂಡದಿಂದ ನಡೆದ ನೃತ್ಯ ಭಜನೆಯು ಭಕ್ತಾದಿಗಳ ಮನಸೂರೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು