10:44 PM Wednesday22 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

Kodagu | ಶ್ರೀ ಗಣೇಶ ಸೇವಾ ಸಮಿತಿಯಿಂದ ವೈಭವದ ಗಣೇಶೋತ್ಸವ: ಮೇಕೇರಿಯಲ್ಲಿ ಗಮನಸೆಳೆದ ಭಜನೆ ಕುಣಿತ

31/08/2025, 15:38

ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿ ಗ್ರಾಮದ ಶ್ರೀ ಗೌರೀಶಂಕರ ದೇವಾಲಯದಲ್ಲಿ ಶ್ರೀ ಗಣೇಶ ಸೇವಾ ಸಮಿತಿ ಆಶ್ರಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣೇಶನ ಶೋಭಾಯಾತ್ರೆಯಲ್ಲಿ ಪುತ್ತೂರಿನ ಭಜನಾ ತಂಡದಿಂದ ನೃತ್ಯ ಭಜನೆ ಗಮನ ಸೆಳೆಯಿತು.
ಆಗಸ್ಟ್ 27ರಂದು ಗಣೇಶನ ಉತ್ಸವ ಮೂರ್ತಿಯನ್ನು ಪ್ರತಿಷ್ಥಾಪಿಸುವ ಮೂಲಕ ಗಣೇಶೋತ್ಸವಕ್ಕೆ ಚಾಲನೆ ನೀಡಿ 29ರಂದು ಸಂಜೆ ಸುಭಾಷ್‌ನಗರದ ಹೊಳೆಯಲ್ಲಿ ಗಣೇಶನ ಉತ್ಸವ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು.
ಈ ನಡುವೆ ದೇವಾಲಯದ ಆವರಣದಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗ್ರಾಮದ ನಿವಾಸಿ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ ನಡೆಯಿತು.
ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ವಾಗ್ಮಿ ಶ್ರೀಶಾ ಅವರು ಗಣೇಶೋತ್ವವದ ಆಚರಣೆ, ಮಹತ್ವ, ನಡೆದು ಬಂದ ಹಾದಿಯ ಕುರಿತು ಧಾರ್ಮಿಕ ಪ್ರವಚನ ನೀಡಿದರು.
28ರಂದು ಸಂಜೆ ಖ್ಯಾತ ಗಾಯನ ತಂಡದಿಂದ ಸಂಗೀತ ಸತ್ಸಂಗ, ಧಾರ್ಮಿಕ ಪ್ರವಚನ ನಡೆಯಿತು. ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಶ್ರೀ ಗೌರಿ ಗಣೇಶನ ಉತ್ಸವ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಮೇಕೇರಿ ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಹೊರಟು ಸುಭಾಷ್ ನಗರದ ಹೊಳೆಯಲ್ಲಿ ವಿಸರ್ಜಿಸಲಾಯಿತು. ಶ್ರೀ ಗಣೇಶ ಸೇವಾ ಸಮಿತಿಯಿಂದ ಪ್ರತೀದಿ ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಂತರ್ಪಣೆ ನಡೆಯಿತು.
ಗಮನ ಸೆಳೆದ ಭಜನೆ ಕುಣಿತ ಈ ಬಾರಿ ಮೇಕೇರಿ ಗ್ರಾಮದಲ್ಲಿ ನೃತ್ಯ ಭಜನೆಯ ಸದ್ದು ಭಕ್ತಾದಿಗಳನ್ನು ಪುಳಕಿತಗೊಳಿಸಿತು. ಶ್ರೀ ಗಣೇಶ ಸೇವಾ ಸಮಿತಿಯ ಆಶ್ರಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣೇಶನ ಶೋಭಾಯಾತ್ರೆಯಲ್ಲಿ ಪುತ್ತೂರಿನ ಆನಡ್ಕದ ಶ್ರೀರಾಮ ಭಜನಾ ತಂಡದಿಂದ ನಡೆದ ನೃತ್ಯ ಭಜನೆಯು ಭಕ್ತಾದಿಗಳ ಮನಸೂರೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು