2:04 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

Kodagu | ಶ್ರೀ ಗಣೇಶ ಸೇವಾ ಸಮಿತಿಯಿಂದ ವೈಭವದ ಗಣೇಶೋತ್ಸವ: ಮೇಕೇರಿಯಲ್ಲಿ ಗಮನಸೆಳೆದ ಭಜನೆ ಕುಣಿತ

31/08/2025, 15:38

ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿ ಗ್ರಾಮದ ಶ್ರೀ ಗೌರೀಶಂಕರ ದೇವಾಲಯದಲ್ಲಿ ಶ್ರೀ ಗಣೇಶ ಸೇವಾ ಸಮಿತಿ ಆಶ್ರಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣೇಶನ ಶೋಭಾಯಾತ್ರೆಯಲ್ಲಿ ಪುತ್ತೂರಿನ ಭಜನಾ ತಂಡದಿಂದ ನೃತ್ಯ ಭಜನೆ ಗಮನ ಸೆಳೆಯಿತು.
ಆಗಸ್ಟ್ 27ರಂದು ಗಣೇಶನ ಉತ್ಸವ ಮೂರ್ತಿಯನ್ನು ಪ್ರತಿಷ್ಥಾಪಿಸುವ ಮೂಲಕ ಗಣೇಶೋತ್ಸವಕ್ಕೆ ಚಾಲನೆ ನೀಡಿ 29ರಂದು ಸಂಜೆ ಸುಭಾಷ್‌ನಗರದ ಹೊಳೆಯಲ್ಲಿ ಗಣೇಶನ ಉತ್ಸವ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು.
ಈ ನಡುವೆ ದೇವಾಲಯದ ಆವರಣದಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗ್ರಾಮದ ನಿವಾಸಿ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ ನಡೆಯಿತು.
ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ವಾಗ್ಮಿ ಶ್ರೀಶಾ ಅವರು ಗಣೇಶೋತ್ವವದ ಆಚರಣೆ, ಮಹತ್ವ, ನಡೆದು ಬಂದ ಹಾದಿಯ ಕುರಿತು ಧಾರ್ಮಿಕ ಪ್ರವಚನ ನೀಡಿದರು.
28ರಂದು ಸಂಜೆ ಖ್ಯಾತ ಗಾಯನ ತಂಡದಿಂದ ಸಂಗೀತ ಸತ್ಸಂಗ, ಧಾರ್ಮಿಕ ಪ್ರವಚನ ನಡೆಯಿತು. ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಶ್ರೀ ಗೌರಿ ಗಣೇಶನ ಉತ್ಸವ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಮೇಕೇರಿ ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಹೊರಟು ಸುಭಾಷ್ ನಗರದ ಹೊಳೆಯಲ್ಲಿ ವಿಸರ್ಜಿಸಲಾಯಿತು. ಶ್ರೀ ಗಣೇಶ ಸೇವಾ ಸಮಿತಿಯಿಂದ ಪ್ರತೀದಿ ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಂತರ್ಪಣೆ ನಡೆಯಿತು.
ಗಮನ ಸೆಳೆದ ಭಜನೆ ಕುಣಿತ ಈ ಬಾರಿ ಮೇಕೇರಿ ಗ್ರಾಮದಲ್ಲಿ ನೃತ್ಯ ಭಜನೆಯ ಸದ್ದು ಭಕ್ತಾದಿಗಳನ್ನು ಪುಳಕಿತಗೊಳಿಸಿತು. ಶ್ರೀ ಗಣೇಶ ಸೇವಾ ಸಮಿತಿಯ ಆಶ್ರಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣೇಶನ ಶೋಭಾಯಾತ್ರೆಯಲ್ಲಿ ಪುತ್ತೂರಿನ ಆನಡ್ಕದ ಶ್ರೀರಾಮ ಭಜನಾ ತಂಡದಿಂದ ನಡೆದ ನೃತ್ಯ ಭಜನೆಯು ಭಕ್ತಾದಿಗಳ ಮನಸೂರೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು