7:22 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ…

ಇತ್ತೀಚಿನ ಸುದ್ದಿ

Kodagu | ಶ್ರೀ ಗಣೇಶ ಸೇವಾ ಸಮಿತಿಯಿಂದ ವೈಭವದ ಗಣೇಶೋತ್ಸವ: ಮೇಕೇರಿಯಲ್ಲಿ ಗಮನಸೆಳೆದ ಭಜನೆ ಕುಣಿತ

31/08/2025, 15:38

ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿ ಗ್ರಾಮದ ಶ್ರೀ ಗೌರೀಶಂಕರ ದೇವಾಲಯದಲ್ಲಿ ಶ್ರೀ ಗಣೇಶ ಸೇವಾ ಸಮಿತಿ ಆಶ್ರಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣೇಶನ ಶೋಭಾಯಾತ್ರೆಯಲ್ಲಿ ಪುತ್ತೂರಿನ ಭಜನಾ ತಂಡದಿಂದ ನೃತ್ಯ ಭಜನೆ ಗಮನ ಸೆಳೆಯಿತು.
ಆಗಸ್ಟ್ 27ರಂದು ಗಣೇಶನ ಉತ್ಸವ ಮೂರ್ತಿಯನ್ನು ಪ್ರತಿಷ್ಥಾಪಿಸುವ ಮೂಲಕ ಗಣೇಶೋತ್ಸವಕ್ಕೆ ಚಾಲನೆ ನೀಡಿ 29ರಂದು ಸಂಜೆ ಸುಭಾಷ್‌ನಗರದ ಹೊಳೆಯಲ್ಲಿ ಗಣೇಶನ ಉತ್ಸವ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು.
ಈ ನಡುವೆ ದೇವಾಲಯದ ಆವರಣದಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗ್ರಾಮದ ನಿವಾಸಿ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ ನಡೆಯಿತು.
ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ವಾಗ್ಮಿ ಶ್ರೀಶಾ ಅವರು ಗಣೇಶೋತ್ವವದ ಆಚರಣೆ, ಮಹತ್ವ, ನಡೆದು ಬಂದ ಹಾದಿಯ ಕುರಿತು ಧಾರ್ಮಿಕ ಪ್ರವಚನ ನೀಡಿದರು.
28ರಂದು ಸಂಜೆ ಖ್ಯಾತ ಗಾಯನ ತಂಡದಿಂದ ಸಂಗೀತ ಸತ್ಸಂಗ, ಧಾರ್ಮಿಕ ಪ್ರವಚನ ನಡೆಯಿತು. ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಶ್ರೀ ಗೌರಿ ಗಣೇಶನ ಉತ್ಸವ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಮೇಕೇರಿ ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಹೊರಟು ಸುಭಾಷ್ ನಗರದ ಹೊಳೆಯಲ್ಲಿ ವಿಸರ್ಜಿಸಲಾಯಿತು. ಶ್ರೀ ಗಣೇಶ ಸೇವಾ ಸಮಿತಿಯಿಂದ ಪ್ರತೀದಿ ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಂತರ್ಪಣೆ ನಡೆಯಿತು.
ಗಮನ ಸೆಳೆದ ಭಜನೆ ಕುಣಿತ ಈ ಬಾರಿ ಮೇಕೇರಿ ಗ್ರಾಮದಲ್ಲಿ ನೃತ್ಯ ಭಜನೆಯ ಸದ್ದು ಭಕ್ತಾದಿಗಳನ್ನು ಪುಳಕಿತಗೊಳಿಸಿತು. ಶ್ರೀ ಗಣೇಶ ಸೇವಾ ಸಮಿತಿಯ ಆಶ್ರಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣೇಶನ ಶೋಭಾಯಾತ್ರೆಯಲ್ಲಿ ಪುತ್ತೂರಿನ ಆನಡ್ಕದ ಶ್ರೀರಾಮ ಭಜನಾ ತಂಡದಿಂದ ನಡೆದ ನೃತ್ಯ ಭಜನೆಯು ಭಕ್ತಾದಿಗಳ ಮನಸೂರೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು