10:16 PM Saturday7 - March 2026
ಬ್ರೇಕಿಂಗ್ ನ್ಯೂಸ್
ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಕರೆ

31/08/2025, 19:11

ಬೆಂಗಳೂರು(reporterkarnataka.com): ದಂತ ವೈದ್ಯಕೀಯ ಕ್ಷೇತ್ರಕ್ಕೆ ಅತ್ಯುತ್ತಮ ಭವಿಷ್ಯವಿದೆ. ಇದರಿಂದ ಸಾಕಷ್ಟು ಜನರಿಗೆ ಉತ್ತಮ ದಂತ ಆರೋಗ್ಯ ಸೇವೆ ನೀಡಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಹಳ್ಳಿಗಳಲ್ಲಿ ಈ ಕ್ಷೇತ್ರ ಹೆಚ್ಚು ತಲುಪದಿರುವುದು ಆತಂಕದ ವಿಷಯ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿ ಉತ್ತಮ ಯೋಜನೆ ರೂಪಿಸಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್‌ ಪಾಟೀಲ್
ಹೇಳಿದರು.
ಸರ್ಕಾರಿ ದಂತ ವೈದ್ಯಕೀಯ ಕಾಲೇಜಿನ ಆವರಣದಲ್ಲಿರುವ ಡಾ. ಎಸ್‌. ರಾಮಚಂದ್ರ ಆಡಿಟೋರಿಯಂನಲ್ಲಿ ಇಂಡಿಯನ್‌ ಡೆಂಟಲ್‌ ಅಸೋಸಿಯೇಷನ್‌ ಆಯೋಜಿಸಿದ ಡೆಂಟಿಸ್ಟ್‌ ಶೃಂಗಸಭೆ-2025 ರಲ್ಲಿ ಸಚಿವರು ಭಾಷಣ ಮಾಡಿದರು.
ದಂತ ವೈದ್ಯಕೀಯ ಎನ್ನುವುದು ಅತ್ಯಂತ ಸೂಕ್ಷ್ಮ ಮತ್ತು ನಿಖರತೆ ಹೆಚ್ಚು ಕೋರುವ ವಿಷಯವಾಗಿದೆ. ದಂತ ಆರೋಗ್ಯದ ಬಗ್ಗೆ ಜನಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಹಲ್ಲು ನೋವು ಬಂದರೆ ಅದನ್ನು ತಡೆದುಕೊಳ್ಳಲು ಸಾಧ್ಯವಿಲ್ಲ. ಇದು ಎಲ್ಲರಿಗೂ ಅನುಭವಕ್ಕೆ ಬಂದಿರಬಹುದು. ಇದಕ್ಕೆ ಚಿಕಿತ್ಸೆ ನೀಡುವ ದಂತ ವೈದ್ಯರು ಎಂದಿಗೂ ಸದಾ ಸ್ಮರಣೀಯರು ಎಂದು ಸಚಿವರು ತಿಳಿಸಿದರು.
ನಗರ, ಜಿಲ್ಲಾ, ತಾಲೂಕು ಮಟ್ಟದಲ್ಲಿ ದಂತ ವೈದ್ಯ ಸೇವೆ ಲಭ್ಯವಾಗುತ್ತಿದೆ. ಆದರೆ ಹಳ್ಳಿಗಳಲ್ಲಿ ಇದು ತಲುಪುತ್ತಿಲ್ಲ. ಹಲ್ಲು, ಒಸಡಿನ ಆರೋಗ್ಯ ಕಾಪಾಡಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಿ ದಂತ ವೈದ್ಯ ಸೇವೆಯನ್ನು ಹಳ್ಳಿ ಹಳ್ಳಿಗೂ ಕೊಂಡೊಯ್ಯಬೇಕಾಗಿದೆ ಎಂದು ಡಾ. ಪಾಟೀಲ್‌ ವಿವರಿಸಿದರು.
ಯುವ ದಂತ ವೈದ್ಯರ ಮೇಲೆ ಈ ಜವಾಬ್ದಾರಿ ಹೆಚ್ಚಾಗಿದೆ. ಈಗ ತಾನೇ ಕಾಲೇನಿಂದ ದಂತ ವೈದ್ಯ ಎಂಬ ಬಿರುದು ಪಡೆದು ಹೋಗುವವರು ಎಲ್ಲ ವರ್ಗದ ಜನರಿಗೆ ಇದನ್ನು ತಲುಪಿಸಬೇಕಾಗಿದೆ. ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಸಚಿವರು ಸಲಹೆ ನೀಡಿದರು.
ನಮ್ಮ ಸರ್ಕಾರ ಕೂಡ ಈ ನಿಟ್ಟಿನಲ್ಲಿ ಕೆಲವು ಮಹತ್ವದ ಯೋಜನೆ ರೂಪಿಸುತ್ತಿದೆ. ಹೊಸ ಡೆಂಟಲ್‌ ಕೌನ್ಸಿಲ್‌ ರಚನೆ ಮಾಡಲು ಚಿಂತನೆ ನಡೆದಿದಿದೆ. ರಾಷ್ಟ್ರೀಯ ದಂತ ಆಯೋಗ ಮಾರ್ಗಸೂಚಿಯಡಿ ರಾಜ್ಯದ ಡೆಂಟಲ್‌ ಕೌನ್ಸಿಲ್ ಕಾರ್ಯ ನಿರ್ವಹಿಸಲಿದೆ ಎಂದರು.

*108 ಅಡಿ ಉದ್ದದ ತ್ರಿವರ್ಣ ಧ್ವಜ ಸ್ತಂಭ ಉದ್ಘಾಟನೆ;*
ಇದೇ ಸಂದರ್ಭದಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ 108 ಅಡಿ ತ್ರಿವರ್ಣ ಧ್ವಜಸ್ತಂಭವನ್ನು ಸಚಿವರು ಉದ್ಘಾಟಿಸಿದರು.
1986ನೇ ಬ್ಯಾಚ್‌ನ ವಿದ್ಯಾರ್ಥಿಗಳ ಕೊಡುಗೆ ಇದಾಗಿದೆ. ವಿಕ್ಟೋರಿಯಾ ಆಸ್ಪತ್ರೆ 2025 ರಲ್ಲಿ 125 ವರ್ಷಗಳನ್ನು ಪೂರೈಸುತ್ತಿದೆ. ಹಲವು ದಶಕಗಳಿಂದಲೂ ಅತ್ಯುತ್ತಮ, ಅರ್ಥಪೂರ್ಣ ಮತ್ತು ಸ್ಮರಣೀಯ ಸೇವೆಯನ್ನು ಈ ಸಂಸ್ಥೆ ನೀಡಿದೆ.
ದಕ್ಷಿಣ ಭಾರತದಲ್ಲಿರುವ ಮೆಡಿಕಲ್‌ ಕಾಲೇಜುಗಳಲ್ಲಿ ಇದು ಅತ್ಯಂತ ಎತ್ತರದ ಧ್ವಜಸ್ಥಂಭವಾಗಿದೆ. ಇಡೀ ದೇಶದಲ್ಲಿ ಮೂರನೇ ಅತಿ ದೊಡ್ಡ ಧ್ವಜಸ್ಥಂಭವಾಗಿದೆ. ಮೊದಲೆರಡು ಸ್ಥಾನದಲ್ಲಿ ನವದೆಹಲಿಯ ಏಮ್ಸ್‌ ಮತ್ತು ಪುಣೆಯ ಎಎಫ್‌ಎಂಸಿ ಇದೆ.
ಇದೇ ಸಂದರ್ಭದಲ್ಲಿ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಮೂರು ಮಾಡ್ಯುಲರ್ ಆಪರೇಷನ್ ಥಿಯೇಟರ್‌ಗಳನ್ನು ಸಚಿವರು ಉದ್ಘಾಟಿಸಿದರು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ.ಬಿ.ಎಲ್. ಸುಜಾತಾ ರಾಥೋಡ್, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕಿ ಡಾ.ಎಸ್.ಟಿ. ಕಾವ್ಯ, ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ.ಗಿರೀಶ್ ಗಿರಡ್ಡಿ, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ದೀಪಕ್ ಮತ್ತು ವಾಣಿ ವಿಲಾಸ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಸವಿತಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು