7:23 AM Wednesday3 - September 2025
ಬ್ರೇಕಿಂಗ್ ನ್ಯೂಸ್
ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ

ಇತ್ತೀಚಿನ ಸುದ್ದಿ

Mangaluru | ಕೆಲರಾಯ್‌ ಸೈಂಟ್‌ ಆ್ಯನ್ಸ್ ಚರ್ಚ್ ನಲ್ಲಿ ‘ಕೊಂಕಣಿ ಸಂಭ್ರಮ್ 25’

31/08/2025, 21:27

ಮಂಗಳೂರು(reporterkarnataka.com): ಮಂಗಳೂರಿನ ಕೆಲರಾಯ್‌ ಸೈಂಟ್‌ ಆ್ಯನ್ಸ್ ಚರ್ಚ್ ನಲ್ಲಿ ‘ಕೊಂಕಣಿ ಸಂಭ್ರಮ್ 25’ ಕಾರ್ಯಕ್ರಮ ಭಾನುವಾರ ನಡೆಯಿತು.
ಕೆಲರಾಯ್‌ ಚರ್ಚ್ ನ ಧರ್ಮಗುರು ವಂದನೀಯ ಫಾ. ಸಿಲ್ವೆಸ್ಟರ್ ಡಿ’ಕೋಸ್ತಾ ಅವರು ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಕೊಂಕಣಿ ಭಾಷೆಯನ್ನು ಮನೆಯಲ್ಲಿ ಮಾತನಾಡುವ ಮೂಲಕ ಉಳಿಸಿ ಬೆಳೆಸ ಬೇಕು. ಮುಂದಿನ ಪೀಳಿಗೆಗೆ ಹಸ್ತಾಂತರಿಸ ಬೇಕು ಎಂದು ಕರೆ ನೀಡಿದರು.
ಕೊಂಕಣಿ ಸಾಹಿತಿ ಹಾಗೂ ಶಿಕ್ಷಕ ಫ್ರಾನ್ಸಿಸ್‌ ಡಿ’ಕುನ್ಹಾ, ಫೋರ್‌ ವಿಂಡ್ಸ್‌ ನಿರ್ದೇಶಕ ಎಲಿಯಾಸ್ ಫೆರ್ನಾಂಡಿಸ್‌, ಕೆಲರಾಯ್‌ ಚರ್ಚ್ ನ ವಾಸ್ತವ್ಯ ಧರ್ಮಗುರು ವಂದನೀಯ ಫಾ. ರೋಶನ್ ಫೆರ್ನಾಂಡಿಸ್, ಚರ್ಚ್ ಉಪಾಧ್ಯಕ್ಷ ಸಂತೋಷ್‌ ಡಿ’ಕೋಸ್ತಾ, ಕಾರ್ಯದರ್ಶಿ ಸೆಲಿನ್ ಡಿ’ಮೆಲ್ಲೊ, ಫಾತಿಮಾ ಕಾನ್ವೆಂಟಿನ ಸುಪೀರಿಯರ್ ಭಗಿನಿ ಐರಿನ್‌ ರೊಡ್ರಿಗಸ್, ಆರೋಗ್ಯ ಮಾತಾ ಕಾನ್ವೆಂಟಿನ ಸುಪೀರಿಯರ್‌ ಭಗಿನಿ ಝೀಜಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 40 ಮಕ್ಕಳಿಂದ ಕೊಂಕಣಿಯ ವಿವಿಧ ಸಮುದಾಯಗಳ ವಸ್ತ್ರ ಧಾರಣೆ ಪ್ರದರ್ಶನ, 10 ಕುಟುಂಬಗಳಿಂದ ಕೊಂಕಣಿ ಪುಸ್ತಕ ಪ್ರದರ್ಶನ, ನಾಲ್ಕು ತಂಡಗಳಿಂದ ಕೊಂಕಣಿ ಸಮುದಾಯಗಳ ಜನರು ಮನೆಯಲ್ಲಿ ಬಳಸುವ ಹಳೆಯ ಸಾಧನಗಳ ಪ್ರದರ್ಶನ, 14 ತಂಡಗಳಿಂದ ಕೊಂಕಣಿ ಗೀತೆಗಳ ಗಾಯನ, 9 ತಂಡಗಳಿಂದ ಕೊಂಕಣಿ ನೃತ್ಯ ಪ್ರದರ್ಶನ ನಡೆಯಿತು. ಕೊನೆಯಲ್ಲಿ ಸಾಂಪ್ರದಾಯಿಕ ಭೋಜನದ ವ್ಯವಸ್ಥೆ ಇತ್ತು.

ಇತ್ತೀಚಿನ ಸುದ್ದಿ

ಜಾಹೀರಾತು