8:55 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Mangaluru | ಕೆಲರಾಯ್‌ ಸೈಂಟ್‌ ಆ್ಯನ್ಸ್ ಚರ್ಚ್ ನಲ್ಲಿ ‘ಕೊಂಕಣಿ ಸಂಭ್ರಮ್ 25’

31/08/2025, 21:27

ಮಂಗಳೂರು(reporterkarnataka.com): ಮಂಗಳೂರಿನ ಕೆಲರಾಯ್‌ ಸೈಂಟ್‌ ಆ್ಯನ್ಸ್ ಚರ್ಚ್ ನಲ್ಲಿ ‘ಕೊಂಕಣಿ ಸಂಭ್ರಮ್ 25’ ಕಾರ್ಯಕ್ರಮ ಭಾನುವಾರ ನಡೆಯಿತು.
ಕೆಲರಾಯ್‌ ಚರ್ಚ್ ನ ಧರ್ಮಗುರು ವಂದನೀಯ ಫಾ. ಸಿಲ್ವೆಸ್ಟರ್ ಡಿ’ಕೋಸ್ತಾ ಅವರು ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಕೊಂಕಣಿ ಭಾಷೆಯನ್ನು ಮನೆಯಲ್ಲಿ ಮಾತನಾಡುವ ಮೂಲಕ ಉಳಿಸಿ ಬೆಳೆಸ ಬೇಕು. ಮುಂದಿನ ಪೀಳಿಗೆಗೆ ಹಸ್ತಾಂತರಿಸ ಬೇಕು ಎಂದು ಕರೆ ನೀಡಿದರು.
ಕೊಂಕಣಿ ಸಾಹಿತಿ ಹಾಗೂ ಶಿಕ್ಷಕ ಫ್ರಾನ್ಸಿಸ್‌ ಡಿ’ಕುನ್ಹಾ, ಫೋರ್‌ ವಿಂಡ್ಸ್‌ ನಿರ್ದೇಶಕ ಎಲಿಯಾಸ್ ಫೆರ್ನಾಂಡಿಸ್‌, ಕೆಲರಾಯ್‌ ಚರ್ಚ್ ನ ವಾಸ್ತವ್ಯ ಧರ್ಮಗುರು ವಂದನೀಯ ಫಾ. ರೋಶನ್ ಫೆರ್ನಾಂಡಿಸ್, ಚರ್ಚ್ ಉಪಾಧ್ಯಕ್ಷ ಸಂತೋಷ್‌ ಡಿ’ಕೋಸ್ತಾ, ಕಾರ್ಯದರ್ಶಿ ಸೆಲಿನ್ ಡಿ’ಮೆಲ್ಲೊ, ಫಾತಿಮಾ ಕಾನ್ವೆಂಟಿನ ಸುಪೀರಿಯರ್ ಭಗಿನಿ ಐರಿನ್‌ ರೊಡ್ರಿಗಸ್, ಆರೋಗ್ಯ ಮಾತಾ ಕಾನ್ವೆಂಟಿನ ಸುಪೀರಿಯರ್‌ ಭಗಿನಿ ಝೀಜಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 40 ಮಕ್ಕಳಿಂದ ಕೊಂಕಣಿಯ ವಿವಿಧ ಸಮುದಾಯಗಳ ವಸ್ತ್ರ ಧಾರಣೆ ಪ್ರದರ್ಶನ, 10 ಕುಟುಂಬಗಳಿಂದ ಕೊಂಕಣಿ ಪುಸ್ತಕ ಪ್ರದರ್ಶನ, ನಾಲ್ಕು ತಂಡಗಳಿಂದ ಕೊಂಕಣಿ ಸಮುದಾಯಗಳ ಜನರು ಮನೆಯಲ್ಲಿ ಬಳಸುವ ಹಳೆಯ ಸಾಧನಗಳ ಪ್ರದರ್ಶನ, 14 ತಂಡಗಳಿಂದ ಕೊಂಕಣಿ ಗೀತೆಗಳ ಗಾಯನ, 9 ತಂಡಗಳಿಂದ ಕೊಂಕಣಿ ನೃತ್ಯ ಪ್ರದರ್ಶನ ನಡೆಯಿತು. ಕೊನೆಯಲ್ಲಿ ಸಾಂಪ್ರದಾಯಿಕ ಭೋಜನದ ವ್ಯವಸ್ಥೆ ಇತ್ತು.

ಇತ್ತೀಚಿನ ಸುದ್ದಿ

ಜಾಹೀರಾತು