8:19 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು ಅಂತಿಮ ಎಚ್ಚರಿಕೆ

01/09/2025, 16:07

ಬೆಂಗಳೂರು(reporterkarnataka.com): ಕಾಳಿ ನದಿ ಯೋಜನೆ 1ನೇ ಹಂತ ಸೂಪಾ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆ ಜಲಾಶಯದ ಕೆಳಹಂತದ ಪ್ರದೇಶದಲ್ಲಿ ಪ್ರವಾಹದ ಕುರಿತು ಕೆಪಿಸಿಸಿಎಲ್ ವತಿಯಿಂದ ಮೂರನೆಯ ಹಾಗೂ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ.
ಸೂಪಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿರುವುದರಿಂದ ನೀರಿನ ಮಟ್ಟವು ಸತತವಾಗಿ ಏರುತ್ತಿದೆ. ಜಲಾಶಯದ ಗರಿಷ್ಠ ಮಟ್ಟವು 564.00 ಮೀಟರ ಆಗಿದ್ದು, ನೀರಿನ ಸಂಗ್ರಹಣ ಸಾಮರ್ಥ್ಯ 147.55 ಟಿ.ಎಂ.ಸಿ. ಇರುತ್ತದೆ. ಜಲಾಸಯದ ಈಗಿನ ನೀರಿನ ಮಟ್ಟವು 558.87 ಮೀಟರ್ ಆಗಿದ್ದು, 126.345 ಟಿಎಂಸಿ ನೀರಿನೊಂದಿಗೆ ಒಟ್ಟು ಸಾಮರ್ಥ್ಯದ ಶೇ. 85.63ರಷ್ಟು ಭರ್ತಿಯಾಗಿದೆ.
ಇದಲ್ಲದೆ, ಜಲಾಶಯದ ಒಳಹರಿವು ಸುಮಾರು 21,261 ಕ್ಯೂಸೆಕ್ ಇದ್ದು, ನೀರಿನ ಹರಿವು ಇದೇ ರೀತಿ ಮುಂದುವರಿದರೆ ಜಲಾಶಯವು ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇರುತ್ತದೆ. ಆದ್ದರಿಂದ ಆಣೆಕಟ್ಟು ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರ ಬಿಡಲಾಗುವುದು ಎಂದು ಕೆಪಿಸಿಎಲ್ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಆಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ಇತ್ಯಾದಿಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು. ಆಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ, ಜಲಸಾಹಸ ಕ್ರೀಡಾ ಚಟುವಟಿಕೆಗಳನ್ನು ಮತ್ತು ಇತರೆ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೂ ನಡೆಸಬಾರದು ಎಂದು ಮನವಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು