11:12 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು ಅಂತಿಮ ಎಚ್ಚರಿಕೆ

01/09/2025, 16:07

ಬೆಂಗಳೂರು(reporterkarnataka.com): ಕಾಳಿ ನದಿ ಯೋಜನೆ 1ನೇ ಹಂತ ಸೂಪಾ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆ ಜಲಾಶಯದ ಕೆಳಹಂತದ ಪ್ರದೇಶದಲ್ಲಿ ಪ್ರವಾಹದ ಕುರಿತು ಕೆಪಿಸಿಸಿಎಲ್ ವತಿಯಿಂದ ಮೂರನೆಯ ಹಾಗೂ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ.
ಸೂಪಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿರುವುದರಿಂದ ನೀರಿನ ಮಟ್ಟವು ಸತತವಾಗಿ ಏರುತ್ತಿದೆ. ಜಲಾಶಯದ ಗರಿಷ್ಠ ಮಟ್ಟವು 564.00 ಮೀಟರ ಆಗಿದ್ದು, ನೀರಿನ ಸಂಗ್ರಹಣ ಸಾಮರ್ಥ್ಯ 147.55 ಟಿ.ಎಂ.ಸಿ. ಇರುತ್ತದೆ. ಜಲಾಸಯದ ಈಗಿನ ನೀರಿನ ಮಟ್ಟವು 558.87 ಮೀಟರ್ ಆಗಿದ್ದು, 126.345 ಟಿಎಂಸಿ ನೀರಿನೊಂದಿಗೆ ಒಟ್ಟು ಸಾಮರ್ಥ್ಯದ ಶೇ. 85.63ರಷ್ಟು ಭರ್ತಿಯಾಗಿದೆ.
ಇದಲ್ಲದೆ, ಜಲಾಶಯದ ಒಳಹರಿವು ಸುಮಾರು 21,261 ಕ್ಯೂಸೆಕ್ ಇದ್ದು, ನೀರಿನ ಹರಿವು ಇದೇ ರೀತಿ ಮುಂದುವರಿದರೆ ಜಲಾಶಯವು ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇರುತ್ತದೆ. ಆದ್ದರಿಂದ ಆಣೆಕಟ್ಟು ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರ ಬಿಡಲಾಗುವುದು ಎಂದು ಕೆಪಿಸಿಎಲ್ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಆಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ಇತ್ಯಾದಿಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು. ಆಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ, ಜಲಸಾಹಸ ಕ್ರೀಡಾ ಚಟುವಟಿಕೆಗಳನ್ನು ಮತ್ತು ಇತರೆ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೂ ನಡೆಸಬಾರದು ಎಂದು ಮನವಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು