3:13 AM Sunday28 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಬರವಣಿಗೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಿ: ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಹಿತಿ ಮೆಹಂದಳೆ

02/09/2025, 15:49

ಮಂಗಳೂರು(reporterkarnataka.com): ಕರ್ನಾಟಕದ ಒಟ್ಟು ವ್ಯಾಪ್ತಿಯಲ್ಲಿ ವರ್ಷಕ್ಕೆ ಸುಮಾರು ಆರು ಸಾವಿರ ಸಾಹಿತ್ಯ ಕೃತಿಗಳು ಪ್ರಕಟವಾಗುತ್ತಿದ್ದರೂ ಇವುಗಳಲ್ಲಿ ಓದುಗರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಇರುವಂತವುಗಳು ಕೇವಲ ಹತ್ತಾರು ಮಾತ್ರ, ಇಂತಹ ಸಂದರ್ಭದಲ್ಲಿ ಬರಹಗಾರರು ಗುಣ ಮಟ್ಟದ ಬರವಣಿಗೆ ಬಗ್ಗೆ ಹೆಚ್ಚು ಅದ್ಯತೆ ನೀಡಬೇಕಾಗಿ ಸಾಹಿತಿ ಸಂತೋಷ ಕುಮಾರ ಮೆಹಂದಳೆ ಅಭಿಪ್ರಾಯಪಟ್ಟರು.
ಕಲ್ಲಚ್ಚು ಪ್ರಕಾಶನದ ಬೆಳ್ಳಿಹಬ್ಬ ‘ರಜತ ರಂಗು’ ಪ್ರಯುಕ್ತ 16ನೇ ಆವೃತ್ತಿಯ 2025ರ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಸೂಕ್ತ ಆನುಭವ ಮತ್ತು ಓದಿನ ಹಿನ್ನೆಲೆಯಿಲ್ಲದೆ, ಕೇವಲ ಗ್ರಂಥಾಲಯ ಸರಬರಾಜಿನ ಉದ್ದೇಶದಿಂದ ಮಾತ್ರ ಕೃತಿ ರಚನೆ ಉತ್ತಮವಲ್ಲ ಎಂದು ಅವರು ಸಂಧರ್ಭದಲ್ಲಿ ಹೇಳಿದರು.

ವಿವಿಧ ಕ್ಷೇತ್ರಗಳ ಕರ್ನಾಟಕದ ಪಂಚ ಸಾಧಕರಾದ ಡಾ ಎಸ್ ಎಮ್ ಶಿವಪ್ರಕಾಶ್, ಡಾ ಪ್ರಕಾಶ ಕೇಶವ ನಾಡಿಗ್, ಜಬೀವುಲ್ಲಾ ಎಂ ಅಸದ್, ರೆಮೊನಾ ಎವೆಟ್ ಪೆರೇರಾ ಮತ್ತು ಗೋಕಾವಿ ಗೆಳೆಯರ ಬಳಗದ ಪರವಾಗಿ ಜಯಾನಂದ ಮಾದರ ಅವರಿಗೆ ಡಾ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಿದರು. ರಘು ಇಡ್ಕಿದು ಅಭಿನಂದನ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಹೊರ ತಂದಿರುವ ಹಿರಿಯ ಲೇಖಕ ಕಡ್ಕೆ ರಾಮ ಅವಭೃತ ಅವರ ಪರ್ಯಟನಾನುಭವ ಕೃತಿ ಬಿಡುಗಡೆ ನಡೆಯಿತು. ಡಾ ಮೀನಾಕ್ಷಿ ರಾಮಚಂದ್ರ, ಡಾ ಶ್ರೀಧರ್ ಅವಭೃತ ಮತ್ತಿತರರು ಉಪಸ್ಥಿತರಿದ್ದರು. ಪ್ರಕಾಶನದ ವ್ಯವಸ್ಥಾಪಕ ಮುಖ್ಯಸ್ಥ ಸಾಹಿತಿ ಮಹೇಶ ಆರ್ ನಾಯಕ್ ಸ್ವಾಗತಿಸಿದರು. ಎನ್ ಸುಬ್ರಾಯ ಭಟ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು