8:08 AM Monday23 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನಾಭರಣ ಕಳವು: ಏರ್ ಪೋರ್ಟ್ ಲೋಡಿಂಗ್ ನೌಕರರಿಂದಲೇ ಕೃತ್ಯ; 5 ಮಂದಿ ಬಂಧನ

02/09/2025, 20:06

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭಾರಣ ಕಳವು ಮಾಡಿದ ಪ್ರಕರಣ ಸಂಬಂಧಿಸಿದಂತೆ ಬಜಪೆ ಪೊಲೀಸರು 5 ಮಂದಿಯನ್ನು ಬಂಧಿಸಿದ್ದು, ಅಘಾತಕ್ಕಾರಿ ವಿಷಯವೆಂದರೆ ಇವರಲ್ಲಿ 4 ಮಂದಿ ಏರ್ ಪೋರ್ಟ್ ಸಿಬ್ಬಂದಿಗಳಾಗಿದ್ದಾರೆ.
ಬಂಧಿತರನ್ನು ಮಂಗಳೂರು ಹೊರವಲಯದ ಕುಂದಾವರದ ನಿತಿನ್, ಮೂಡು ಪರೇರಾದ ರಾಜೇಶ್, ಸದಾನಂದ, ರವಿರಾಜ್, ಬಜಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ.
ಬಂಧಿತರಲ್ಲಿ ಪ್ರಮುಖ ನಾಲ್ವರು ಆರೋಪಿಗಳು ವಿಮಾನ ನಿಲ್ದಾಣದ ಲೋಡಿಂಗ್ ಮತ್ತು ಅನ್ ಲೋಡಿಂಗ್ ಮಾಡುವ ನೌಕರರು ಆಗಿದ್ದಾರೆ.

*ಏನಿದು ಘಟನೆ?:*
ಮಹಿಳಾ ಪ್ರಯಾಣಿಕರೊಬ್ಬರು ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ದಲ್ಲಿ
ಅಗಸ್ಟ್ 30ರಂದು ಆಗಮಿಸಿದ್ದರು. ವಿಮಾನ ನಿಲ್ದಾಣದ ಬ್ಯಾಗೇಜ್ ಬೆಲ್ಟ್ ನಿಂದ ಟ್ರೋಲಿ ಬ್ಯಾಗ್ ಪಡೆದು ಪರಿಶೀಲನೆ ನಡೆಸಿದ ವೇಳೆ 56 ಗ್ರಾಂ ತೂಕದ 4,50,000 ರೂ. ಮೌಲ್ಯದ ಚಿನ್ನಾಭಾರಣ ಕಳವು ಆಗಿರುವುದು ಗಮನಕ್ಕೆ ಬಂತು. ತಕ್ಷಣ ಅವರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದರು. ತಕ್ಷಣ ಕಾರ್ಯಾಚರಣೆಗೆ ಇಳಿದ ಪೊಲೀಸರು ಏರ್ ಪೋರ್ಟ್
ಸಿಬ್ಬಂದಿಗಳನ್ನು ವಿಚಾರಣೆ ನಡೆಸಿದ ವೇಳೆ ತಪ್ಪು ಒಪ್ಪಿಕೊಂಡಿದ್ದಾರೆ. ಚಿನ್ನಾಭರಣವನ್ನು ರವಿರಾಜ್ ಎಂಬವರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದು, ಈ ಹಿನ್ನಲ್ಲೆಯಲ್ಲಿ ಅ. ಕ್ರ.157/2025 ಕಲಂ 303(2) ಹಾಗೂ ರವಿರಾಜ್ ಎಂಬುವವರನ್ನು 312(2) ಬಿ.ಎನ್. ಎಸ್ ಆರೋಪದ ಮೇರೆಗೆ ಬಂಧಿಸಲಾಯಿತು. ಆರೋಪಿಗಳಿಂದ 5 ಲಕ್ಷ ಮೌಲ್ಯದ 50 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಗಳು ಈ ಹಿಂದೆ ಸಹ ಹಲವು ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು