3:40 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನಾಭರಣ ಕಳವು: ಏರ್ ಪೋರ್ಟ್ ಲೋಡಿಂಗ್ ನೌಕರರಿಂದಲೇ ಕೃತ್ಯ; 5 ಮಂದಿ ಬಂಧನ

02/09/2025, 20:06

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭಾರಣ ಕಳವು ಮಾಡಿದ ಪ್ರಕರಣ ಸಂಬಂಧಿಸಿದಂತೆ ಬಜಪೆ ಪೊಲೀಸರು 5 ಮಂದಿಯನ್ನು ಬಂಧಿಸಿದ್ದು, ಅಘಾತಕ್ಕಾರಿ ವಿಷಯವೆಂದರೆ ಇವರಲ್ಲಿ 4 ಮಂದಿ ಏರ್ ಪೋರ್ಟ್ ಸಿಬ್ಬಂದಿಗಳಾಗಿದ್ದಾರೆ.
ಬಂಧಿತರನ್ನು ಮಂಗಳೂರು ಹೊರವಲಯದ ಕುಂದಾವರದ ನಿತಿನ್, ಮೂಡು ಪರೇರಾದ ರಾಜೇಶ್, ಸದಾನಂದ, ರವಿರಾಜ್, ಬಜಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ.
ಬಂಧಿತರಲ್ಲಿ ಪ್ರಮುಖ ನಾಲ್ವರು ಆರೋಪಿಗಳು ವಿಮಾನ ನಿಲ್ದಾಣದ ಲೋಡಿಂಗ್ ಮತ್ತು ಅನ್ ಲೋಡಿಂಗ್ ಮಾಡುವ ನೌಕರರು ಆಗಿದ್ದಾರೆ.

*ಏನಿದು ಘಟನೆ?:*
ಮಹಿಳಾ ಪ್ರಯಾಣಿಕರೊಬ್ಬರು ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ದಲ್ಲಿ
ಅಗಸ್ಟ್ 30ರಂದು ಆಗಮಿಸಿದ್ದರು. ವಿಮಾನ ನಿಲ್ದಾಣದ ಬ್ಯಾಗೇಜ್ ಬೆಲ್ಟ್ ನಿಂದ ಟ್ರೋಲಿ ಬ್ಯಾಗ್ ಪಡೆದು ಪರಿಶೀಲನೆ ನಡೆಸಿದ ವೇಳೆ 56 ಗ್ರಾಂ ತೂಕದ 4,50,000 ರೂ. ಮೌಲ್ಯದ ಚಿನ್ನಾಭಾರಣ ಕಳವು ಆಗಿರುವುದು ಗಮನಕ್ಕೆ ಬಂತು. ತಕ್ಷಣ ಅವರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದರು. ತಕ್ಷಣ ಕಾರ್ಯಾಚರಣೆಗೆ ಇಳಿದ ಪೊಲೀಸರು ಏರ್ ಪೋರ್ಟ್
ಸಿಬ್ಬಂದಿಗಳನ್ನು ವಿಚಾರಣೆ ನಡೆಸಿದ ವೇಳೆ ತಪ್ಪು ಒಪ್ಪಿಕೊಂಡಿದ್ದಾರೆ. ಚಿನ್ನಾಭರಣವನ್ನು ರವಿರಾಜ್ ಎಂಬವರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದು, ಈ ಹಿನ್ನಲ್ಲೆಯಲ್ಲಿ ಅ. ಕ್ರ.157/2025 ಕಲಂ 303(2) ಹಾಗೂ ರವಿರಾಜ್ ಎಂಬುವವರನ್ನು 312(2) ಬಿ.ಎನ್. ಎಸ್ ಆರೋಪದ ಮೇರೆಗೆ ಬಂಧಿಸಲಾಯಿತು. ಆರೋಪಿಗಳಿಂದ 5 ಲಕ್ಷ ಮೌಲ್ಯದ 50 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಗಳು ಈ ಹಿಂದೆ ಸಹ ಹಲವು ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು