11:33 AM Monday29 - December 2025
ಬ್ರೇಕಿಂಗ್ ನ್ಯೂಸ್
ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣ ಭೂಸ್ವಾಧೀನ | ಗರಿಷ್ಠ ಪರಿಹಾರ: ರಾಜ್ಯ ಸರಕಾರಕ್ಕೆ ಪದ್ಮರಾಜ್ ಆರ್. ಪೂಜಾರಿ ಅಭಿನಂದನೆ

02/09/2025, 21:39

ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟೀಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರವು (MIAGL) ಕಳೆದ ಹತ್ತು ವರ್ಷಗಳಲ್ಲಿ ಎಂದೂ ಪಾವತಿಸದಿದ್ದಷ್ಟು ಮೊತ್ತವನ್ನು ಪಾವತಿಸುವಂತೆ ಮಾಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಗಾಗಿ 32.97 ಎಕರೆ ಜಾಗ ಸ್ವಾಧೀನಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪ್ರಸ್ತಾವನೆಗೆ ಪ್ರಕಾರ ಜಾಗ ಕಳೆದುಕೊಳ್ಳುವವರಿಗೆ ಗರಿಷ್ಠ ಪರಿಹಾರ ನೀಡುವಂತೆ ನಾನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಹಾಗು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ರವರ ಗಮನ ಸೆಳೆದಿದ್ದೆ. ಜತೆಗೆ ಈ ಬಗ್ಗೆ ಸ್ಪೀಕರ್ ಯು.ಟಿ.ಖಾದರ್, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಅಶೋಕ್ವ ರೈ ವಿಧಾನಪರಿಷತ್ ಸದ್ಯರಾದ ಐವನ್ ಡಿಸೋಜ, ಮಂಜನಾಥ ಭಂಡಾರಿಯವರು ನಿರಂತರವಾಗಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರ (Airport Authority) ಮಂಗಳೂರು ವಿಮಾನ ನಿಲ್ದಾಣ ಖಾಸಗಿ ಒಡೆತನದಲ್ಲಿದ್ದರೂ, ರಾಜ್ಯ ಸರ್ಕಾರಕ್ಕೆ ಮೊದಲ ಬಾರಿಗೆ ಹಣ ಪಾವತಿಸಲು ಒಪ್ಪಿದೆ. ಕಾಂಗ್ರೆಸ್ ನೇತೃತ್ವದ ಸರ್ಕಾರವು ಎಲ್ಲಾ ಫಲಾನುಭವಿಗಳಿಗೆ ಸಹಾಯ ಮಾಡಲು ಪಾರದರ್ಶಕ ರೀತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಸಲಿದೆ. ಈ ಹಿಂದೆ ಕೇಂದ್ರ ಸರ್ಕಾರ ಭೂಮಿ ಉಚಿತವಾಗಿ ನೀಡಬೇಕೆಂದು ಒತ್ತಾಯಿಸಿತ್ತು. ಆದರೆ ಸ್ಥಳೀಯ ಭೂಮಾಲೀಕರಿಗೆ ಪರಿಹಾರ ಸಿಗಲೇಬೇಕೆಂದು ರಾಜ್ಯ ಸರ್ಕಾರವು ದೃಢವಾಗಿ ನಿಂತು ಯಶಸ್ವಿಯಾಗಿದೆ. ಜನಪರ ಕಾಳಜಿಯ ಹೊಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಎಂದಿಗೂ ಜನತೆಯ ಪರವಾಗಿದೆ ಎನ್ನುವುದಕ್ಕೆ ಇದು ಒಂದು ನಿದರ್ಶನ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು