9:35 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಮಾದಕ ವಸ್ತು ಮಾರಾಟ: ಬಿಹಾರದ ಇಬ್ಬರು ಆರೋಪಿಗಳ ಬಂಧನ; 1 ಕೆಜಿಗೂ ಅಧಿಕ ಗಾಂಜಾ ವಶ

02/09/2025, 22:30

ಮಂಗಳೂರು(reporterkarnataka.com): ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಹೊರ ರಾಜ್ಯದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಿಹಾರದ ಹರ್ಷ ಕುಮಾರ್ ಮತ್ತು ಅಮರ್ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ.
ಹರ್ಷ ಕುಮಾರ್ ಎಂಬಾತನಿಂದ 1 ಕೆಜಿ 230 ಗ್ರಾಂ ಮತ್ತು ಅಮರ್ ಕುಮಾರ್ ಎಂಬಾತನಿಂದ 80 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ಸುಮಾರು 75,000 ರೂ. ಆಗಿದೆ.
ಆರೋಪಿಗಳು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದಾಗ ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಪಣಂಬೂರು ಠಾಣಾ ಪಿಎಸ್ಐ ಜ್ಞಾನಶೇಖರರವರಿಗೆ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ನಗರ ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತಕರಾದ ಶ್ರೀಕಾಂತ್ ಕೆ. ಅವರ ನಿರ್ದೆಶನದಂತೆ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ಜ್ಞಾನಶೇಖರ ಅವರು ತಮ್ಮ ಸಿಬ್ಬಂದಿಗಳ ಜೊತೆ ಕಾರ್ಯಾಚರಣೆ ನಡೆಸಿದ್ದರು.
ಆರೋಪಿಗಳ ಪೈಕಿ ಒಬ್ಬಾತನು ಬಿಹಾರದ ಪಟ್ನಾದಲ್ಲಿ ಮೀಶೋ ಮತ್ತು ಫ್ಲಿಫ್ ಕಾರ್ಟ್ ಹಬ್ ನಲ್ಲಿ ಮತ್ತು ಇನ್ನೊಬ್ಬ ದೆಹಲಿಯಲ್ಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು