1:53 PM Wednesday19 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ಮಾದಕ ವಸ್ತು ಮಾರಾಟ: ಬಿಹಾರದ ಇಬ್ಬರು ಆರೋಪಿಗಳ ಬಂಧನ; 1 ಕೆಜಿಗೂ ಅಧಿಕ ಗಾಂಜಾ ವಶ

02/09/2025, 22:30

ಮಂಗಳೂರು(reporterkarnataka.com): ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಹೊರ ರಾಜ್ಯದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಿಹಾರದ ಹರ್ಷ ಕುಮಾರ್ ಮತ್ತು ಅಮರ್ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ.
ಹರ್ಷ ಕುಮಾರ್ ಎಂಬಾತನಿಂದ 1 ಕೆಜಿ 230 ಗ್ರಾಂ ಮತ್ತು ಅಮರ್ ಕುಮಾರ್ ಎಂಬಾತನಿಂದ 80 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ಸುಮಾರು 75,000 ರೂ. ಆಗಿದೆ.
ಆರೋಪಿಗಳು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದಾಗ ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಪಣಂಬೂರು ಠಾಣಾ ಪಿಎಸ್ಐ ಜ್ಞಾನಶೇಖರರವರಿಗೆ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ನಗರ ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತಕರಾದ ಶ್ರೀಕಾಂತ್ ಕೆ. ಅವರ ನಿರ್ದೆಶನದಂತೆ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ಜ್ಞಾನಶೇಖರ ಅವರು ತಮ್ಮ ಸಿಬ್ಬಂದಿಗಳ ಜೊತೆ ಕಾರ್ಯಾಚರಣೆ ನಡೆಸಿದ್ದರು.
ಆರೋಪಿಗಳ ಪೈಕಿ ಒಬ್ಬಾತನು ಬಿಹಾರದ ಪಟ್ನಾದಲ್ಲಿ ಮೀಶೋ ಮತ್ತು ಫ್ಲಿಫ್ ಕಾರ್ಟ್ ಹಬ್ ನಲ್ಲಿ ಮತ್ತು ಇನ್ನೊಬ್ಬ ದೆಹಲಿಯಲ್ಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು