1:38 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Kodagu | ಕಾಫಿ ವರ್ಕ್ಸ್ ನಲ್ಲಿ 7 ಸಾವಿರ ಕೆಜಿ ಕಾಫಿ ಕಳ್ಳತನ: 5 ಮಂದಿ ಆರೋಪಿಗಳ ಬಂಧನ

03/09/2025, 11:03

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ತಾಲ್ಲೂಕಿನ ಕೂಡ್ಲುರು ಕೈಗಾರಿಕಾ ಪ್ರದೇಶದಲ್ಲಿರುವ ಉಮಾ ಕಾಫಿ ವರ್ಕ್ಸ್ ನಲ್ಲಿ ಅಂದಾಜು ಏಳು ಸಾವಿರ ಕೆಜಿ ಕಾಫಿ ಕಳ್ಳತನ ಮಾಡಿದ್ದ ಐವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಈ ಕಾಫಿ ವರ್ಕ್ಸ್ ನಲ್ಲಿ ಅಂದಾಜು ಏಳು ಸಾವಿರ ಕೆಜಿ ಕಾಫಿ ಕಳ್ಳತನವಾಗಿದ್ದ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 306, 3(5) BNS Act ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಗಳ ಪತ್ತೆಗಾಗಿ ಸೋಮವಾರಪೇಟೆ ಪೊಲೀಸ್ ಉಪ ವಿಭಾಗದ ಡಿಎಸ್ ಪಿ ಚಂದ್ರಶೇಖರ್, ಕುಶಾಲನಗರ ವೃತ್ತ ನಿರೀಕ್ಷಕರಾದ ದಿನೇಶ್ ಕುಮಾರ್, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಾಮಚಂದ್ರ ಮತ್ತು ವೃತ್ತ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಈ ತಂಡ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಬೈಲುಕುಪ್ಪೆ ಗ್ರಾಮದ ಸುನೀಲ್ ಆರ್ (34), ರಾಜು ಆರ್ (24), ಶರತ್ (24), ಬಿಹಾರ ರಾಜ್ಯ ಪಶ್ಚಿಮ ಚಂಪಾರಣ್ ಜಿಲ್ಲೆ ಮೂಲದ ದಿನೇಶ್ ರಾವತ್ (44) ಮತ್ತು ಬಿಹಾರ ರಾಜ್ಯ ಪೂರ್ವ ಚಂಪಾರಣ್ ಜಿಲ್ಲೆ ಮೂಲದ ಜಿತೇಂದ್ರ ಕುಮಾರ್ ರಾಮ್ (38) ಎಂಬುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


ಬಂಧಿತ ಆರೋಪಿಗಳಿಂದ 6495 ಕೆಜಿ ಕಾಫಿ, ಒಂದು ಕಾರು, ಎರಡು ದ್ವಿ ಚಕ್ರ ವಾಹನ ಮತ್ತು ಒಂದು ಆಟೋ ರಿಕ್ಷಾವನ್ನು ವಶ ಪಡಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು