11:14 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Chikkamagaluru | ವಿವಿಧ ಚರ್ಚುಗಳಲ್ಲಿ ಮಾತೆ ಮರಿಯಮ್ಮನವರ ಹಬ್ಬಕ್ಕೆ ನೋವೆನಾ ಪ್ರಾರ್ಥನೆ

04/09/2025, 12:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸೆಪ್ಟೆಂಬರ್ 8ರಂದು ನಡೆಯಲಿರುವ ಮಾತೆ ಮರಿಯಮ್ಮನವರ ಹಬ್ಬ(ಹೊಸಕ್ಕಿ ಹಬ್ಬ)ಕ್ಕೆ ಮೂಡಿಗೆರೆ ತಾಲ್ಲೂಕಿನಾದ್ಯಂತ ವಿವಿಧ ಚರ್ಚುಗಳು ಒಂಬತ್ತು ದಿನಗಳ ನೊವೇನಾ ಪ್ರಾರ್ಥನೆ ಆರಂಭವಾಗಿದೆ. ಮೂಡಿಗೆರೆ ಸಂತ ಅಂತೋಣಿ ಚರ್ಚ್ ಸೇರಿದಂತೆ ಗೋಣಿಬೀಡಿನ ಕಸ್ಕೇಬೈಲ್,ಬಸ್ಕಲ್,ಬಣಕಲ್,ಕೊಟ್ಟಿಗೆಹಾರ,ಬಾಳೂರು,ಜಾವಳಿ,ಕೆಳಗೂರು, ಹಿರೇಬೈಲ್, ಕೂವೆ ಸೇರಿದಂತೆ ಹಲವೆಡೆ ಬಾಲಿಕ ಮರಿಯ ಪ್ರತಿಮೆಗೆ ಹೂ ಅರ್ಪಣೆ ಮಾಡಿ ವಿಶೇಷ ಪ್ರಾರ್ಥನೆ ಮಾಡುವ ಮೂಲಕ ಶೃದ್ಧಾಭಕ್ತಿ ಅರ್ಪಿಸಲಾಗುತ್ತಿದೆ.ಆಗಸ್ಟ್ 30ರಿಂದಲೇ ಒಂಬತ್ತು ದಿನಗಳ ಕಾಲ ಮರಿಯಮ್ಮನವರ ಜಯಂತಿ ಅಂಗವಾಗಿ ಈ ವಿಶೇಷ ನೊವೇನಾ ಆರಂಭಿಸಲಾಗಿದ್ದು ಹಬ್ಬದ ಪರವಾಗಿ ರಸಪ್ರಶ್ನೆಗಳು ಸೇರಿದಂತೆ ವಿವಿಧ ಸ್ಪರ್ಧೆ ಏರ್ಪಡಿಸಿ ಹಬ್ಬದಂದು ಬಹುಮಾನ ನೀಡಲಾಗುತ್ತದೆ ಎಂದು ಕೊಟ್ಟಿಗೆಹಾರ ಸೆಕ್ರೆಡ್ ಹಾರ್ಟ್ ಚರ್ಚಿನ ಧರ್ಮಗುರು ರೆ.ಫಾ.ವಿಲಿಯಂ ಬರ್ನಾರ್ಡ್ ತಿಳಿಸಿದ್ದಾರೆ.
ವಿವಿಧ ಚರ್ಚುಗಳಲ್ಲಿ ಮಕ್ಕಳು ಸೇರಿದಂತೆ ಕ್ರೈಸ್ತ ಭಕ್ತಾದಿಗಳು ಹೆಚ್ಚಾಗಿ ಸಮಾವೇಶಗೊಂಡು ತಟ್ಟೆಯಲ್ಲಿ ವಿವಿಧ ಹೂಗಳನ್ನು ತಂದು ಬಾಲಿಕ ಮರಿಯಗೆ ಅರ್ಪಿಸಿ ನೋವೆನಾ ಪ್ರಾರ್ಥನೆಯಲ್ಲಿ ಭಾಗವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು